
ಸಕಲೇಶಪುರ : ಅರ್ಜುನ ಆನೆ ಮೃತಪಟ್ಟ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿದ 20 ಜನ ಪ್ರತಿಭಟನಾಕಾರರ ಮೇಲೆ ಕೇಸು ದಾಖಲಿಸಿದ ಯಸಳೂರು ಪೋಲೀಸರು.
ಕಾಡಾನೆ ಸೆರೆ ಹಿಡಿಯುವ ವೇಳೆ ಯಸಳೂರು ಹೋಬಳಿ ದಬ್ಬಳ್ಳಿಕಟ್ಟೆ ಗ್ರಾಮದಲ್ಲಿ ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಸತತವಾಗಿ 8 ಬಾರಿ ಅಂಬಾರಿ ಹೊತ್ತ ಅರ್ಜುನ ಕಾಡಾನೆ ದಾಳಿಗೆ ಬಲಿಯಾದ ಹಿನ್ನಲೆಯಲ್ಲಿ ಅರಣ್ಯ ಇಲಾಖೆಯ ಬೇಜವಾಬ್ದಾರಿಯಿಂದ ಅರ್ಜುನ ಮೃತಪಟ್ಟಿದ್ದಾನೆ ಎಂದು ಸ್ಥಳದಲ್ಲಿ ಪ್ರತಿಭಟನೆ ನಡೆಸಿದ 20 ಜನ ಪ್ರತಿಭಟನಾಕಾರರ ಮೇಲೆ ಯಸಳೂರು ಪೋಲಿಸ್ ಠಾಣೆಯಲ್ಲಿ FIR ದಾಖಲಾಗಿದೆ.
