
*ಉಚಿತ ಆರೋಗ್ಯ ತಪಾಸಣಾ ಶಿಬಿರ*
ಹಾಸನದ ಕಾರೇಕೆರೆಯ ಕೃಷಿ ಮಹಾವಿದ್ಯಾಲಯದ ಅಂತಿಮ ವರ್ಷದ ಬಿ. ಎಸ್. ಸಿ (ಆನರ್ಸ್)ಕೃಷಿ ವಿದ್ಯಾರ್ಥಿಗಳು ಹಾಗೂ ರಾಜೀವ್ ಆಯುರ್ವೇದ ವೈದ್ಯಕೀಯ ವಿಜ್ಞಾಯನಗಳ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯವರ ನೇತೃತ್ವದಲ್ಲಿ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರ 2023-24 ರ ಅಂಗವಾಗಿ ಅರಸೀಕೆರೆ ತಾಲ್ಲೂಕು ಗಂಡಸಿ ಹೋಬಳಿಯ ಕುಡುಕುಂದಿ ಗ್ರಾಮದಲ್ಲಿ *ಉಚಿತ ಆರೋಗ್ಯ ತಪಾಸಣಾ ಶಿಬಿರ* ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಉತ್ತಮ ಆರೋಗ್ಯಕ್ಕಿಂತ ಬೇರೆ ಸಂಪತ್ತಿಲ್ಲ ಎಂಬ ಮಾತಿನಂತೆ ,ಮನುಷ್ಯನಿಗೆ ತಾನು ಆರೋಗ್ಯವಾಗಿದ್ದರೆ ತನ್ನ ಕಾರ್ಯಚಟುವಟಿಕೆಗಳನ್ನು ಉತ್ಸಾಹದಿಂದ ಮಾಡಬಲ್ಲ ಹೀಗಾಗಿ ಆರೋಗ್ಯದ ಮಹತ್ವವನ್ನು ಕುರಿತು ಗ್ರಾಮದ ಜನರಿಗೆ ಮಾಹಿತಿ ನೀಡಲು ಹಾಗೂ ಉಚಿತ ಆರೋಗ್ಯ ತಪಾಸಣೆಯನ್ನು ನಡೆಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಡಾ|| ಎಸ್. ಎನ್ . ವಾಸುದೇವನ್ ಡೀನ್(ಕೃಷಿ), ಕೃಷಿ ಮಹಾವಿದ್ಯಾಲಯ, ಹಾಸನ ಹಾಗೂ ಗ್ರಾಮೀಣ ಕೃಷಿ ಕಾರ್ಯಾನುಭವ ಶಿಬಿರದ ಸಂಯೋಜಕರಾದ ಡಾ|| ಶಂಕರ ಎಂ. ಹೆಚ್., ಸಹ ಸಂಯೋಜಕರಾದ ಡಾ||ಅರವಿಂದ ಕುಮಾರ ಎಂ. ಕೆ. ಹಾಗೂ ಸಹಾಯಕ ಪ್ರಾಧ್ಯಾಪಕರುಗಳಾದ ಶ್ರೀ ಶಿವಬಸಪ್ಪ ಕಂದಕೂರ, ಡಾ|| ವಾಘ್ಮೋರೆ ವಿಜಯ ಕುಮಾರ್ ವೀರಪ್ಪರವರು ಹಾಗೂ ಕುಡುಕುಂದಿಯ ಹಲವಾರು ಗ್ರಾಮಸ್ಥರು ಉಪಸ್ಥಿತರಿದ್ದರು,
ತಪಾಸಣೆಯನ್ನು ಮಾಡಿಸಿಕೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಉತ್ತಮ ಆರೋಗ್ಯದ ಮಹತ್ವ ಮತ್ತು ಕಾಪಾಡಿಕೊಳ್ಳುವ ವಿಧಾನಗಳ ಬಗ್ಗೆ ಮಾಹಿತಿ ನೀಡುವ ಭಿತ್ತಿಪತ್ರಗಳು ಎಲ್ಲರ ಗಮನ ಸೆಳೆದವು.
ಈ ಸಂದರ್ಭದಲ್ಲಿ ಮಾತನಾಡಿದ ಡಾ|| ಎಸ್.ಎನ್ ವಾಸುದೇವನ್ ಡೀನ್ (ಕೃಷಿ) ರವರು ಗ್ರಾಮದ ಜನತೆಗೆ ಆರೋಗ್ಯದ ಮಹತ್ವ ಹಾಗೂ ರಾಜೀವ್ ಆಯುರ್ವೇದ ವೈದ್ಯಕೀಯ ವಿಜ್ಞಾಯನಗಳ ಮಹಾವಿದ್ಯಾಲಯದ ಸಿಬ್ಬಂದಿ ವರ್ಗದವರಿಗೆ ಹಾಗೂ ವಿಧ್ಯಾರ್ಥಿಗಳಿಗೆ ಧನ್ಯವಾದಗಳನ್ನು ತಿಳಿಸಿದರು.



