*ತೆಂಗಿನಕಾಯಿಯಲ್ಲಿ ಮೌಲ್ಯವರ್ಧನೆ ಮತ್ತು ಅದರ ಮಾರುಕಟ್ಟೆ.*

ಚಗಚಗೆರೆ : ಕೃಷಿ ಕಾರ್ಯಾನುಭವ ಶಿಬಿರದ ಅಂಗವಾಗಿ ಚಗಚಗೆರೆ ಗ್ರಾಮದಲ್ಲಿ ಕೃಷಿ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ ತೆಂಗಿನ ಕಾಯಿಯಲ್ಲಿ ಮೌಲ್ಯವರ್ಧನೆ ಮತ್ತು ಅದರ ಮಾರುಕಟ್ಟೆ ಬಗ್ಗೆ ಮಾಹಿತಿ ನೀಡುವ ಉದ್ದೇಶದಿಂದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ನಿಟ್ಟಿನಲ್ಲಿ ರೈತರಿಗೆ ತೆಂಗಿನಕಾಯಿಯ ಮೌಲ್ಯವರ್ಧನೆ ಇಂದ ಆಗುವ ಲಾಭಗಳ ಬಗ್ಗೆ ಹಾಗೂ ಮಾರುಕಟ್ಟೆಯ ಬಗ್ಗೆ ಕೃಷಿ ಕಾಲೇಜಿನ ಆಹಾರ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕರಾದಂತಹ ಡಾ. ಭಾರತಿ. ಸಿ. ಮಿರಾಜಕರ ಅವರು ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ತೆಂಗು ಬೆಳೆಗಾರರು ಹಾಗೂ ರೈತ ಮುಖಂಡರು ಹಾಗೂ ಗ್ರಾಮದ ಯುವಕರು ಭಾಗವಹಿಸಿ ಮಾಹಿತಿ ಪಡೆದುಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *