
ಸಕಲೇಶಪುರ : ಪಟ್ಟಣದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕು ಆಡಳಿತ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ 117ನೇ ಹುಟ್ಟು ಹಬ್ಬದ ಅಂಗವಾಗಿ,ವಿಶ್ವಮಾನವ ದಿನಾಚರಣೆಯನ್ನು ಏರ್ಪಡಿಸಲಾಯಿತು.
ಈ ಸಂದರ್ಭದಲ್ಲಿ ಉಪ ವಿಭಾಗಾ ಧಿಕಾರಿಗಳಾದ ಡಾll ಶೃತಿ ಕಾರ್ಯಕ್ರಮ ಉದ್ಘಾಟನೆ ಮಾಡುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ತಹಸೀಲ್ದಾರ್ ಕೆ ಪುರಂದರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳಾದ ರಾಮಕೃಷ್ಣ, ಸಮಾಜ ಕಲ್ಯಾಣ, ತೋಟಗಾರಿಕೆ ಇಲಾಖೆ ಅಧಿಕಾರಿಗಳು,ಉಪ ತಶೀಲ್ದಾರ್ ಉಮೇಶ್, ನಿವೃತ್ತ ತಹಸಿಲ್ದಾರ್ ಅಣ್ಣೇಗೌಡರು, ಹಾಗೂ ತಲೂಕು ಕಚೇರಿ ಎಲ್ಲಾ ಸಿಬ್ಬಂದಿಗಳು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.
