ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದ ಉದ್ಘಾಟನೆಯ ಸುವರ್ಣ ಕ್ಷಣಗಳು ಹತ್ತಿರವಾಗುತ್ತಿದೆ. ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಗಳು ನಡೆಯಲಿದೆ. ಹೀಗಾಗಿ ಆ ಶುಭ ಗಳಿಗೆಗೆ ಕೋಟ್ಯಾಂತರ ರಾಮನ ಭಕ್ತರು ಬೆರಗು ಕಣ್ಣುಗಳಿಂದ ಕಾಯುತ್ತಿದ್ದಾರೆ.

ಇದೀಗ ಅಯೋಧ್ಯೆ ರಾಮಮಂದಿರದ ಉದ್ಘಾಟನಾ ಮಹೋತ್ಸವದ ಸಂದರ್ಭದಲ್ಲಿ ವಿಶ್ವವಿಖ್ಯಾತ ತಿರುಪತಿ ಲಡ್ಡುಗಳನ್ನು ವಿತರಣೆ ಮಾಡಲು ಟ್ರಸ್ಟ್​ ನಿರ್ಧರಿಸಿದೆ. ಹೌದು, ತಿರುಪತಿಯಿಂದ ಅಯೋಧ್ಯೆಗೆ ಲಡ್ಡು ಪೂರೈಕೆಯಾಗಲಿದೆ ಎಂದು ತಿರುಪತಿ ತಿರುಮಲ ದೇವಸ್ಥಾನಂ ಅಧಿಕೃತವಾಗಿ ಮಾಹಿತಿ ನೀಡಿದೆ. ತಿರುಪತಿ ದೇಗುಲದ ವತಿಯಿಂದ ಅಯೋಧ್ಯೆಗೆ 1 ಲಕ್ಷ ಲಡ್ಡು ಪೂರೈಕೆ ಮಾಡಲಾಗುವುದು. ಪ್ರತಿ ಲಡ್ಡುವಿನ ತೂಕ 25 ಗ್ರಾಂ ಇರುತ್ತದೆ ಎಂದು ಟಿಟಿಡಿಯ ಅಧಿಕಾರಿಗಳು ತಿಳಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *