ಹಾಸನ: ರಾಜ್ಯ ಬಜೆಟ್ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗಾಗಿ ಬಡವರ ಮೇಲೆ ತೆರಿಗೆ ಹೊರೆ ಹಾಕುವ ಬಜೆಟ್ ಆಗಿದೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಟೀಕಿಸಿದ್ದಾರೆ.

ನಗರದಲ್ಲಿ ಮಾಧ್ಯಮದೊಂದಿಗೆ ಮಾತಾಡಿದ ಅವರು ಪ್ರವಾಸೋದ್ಯಮಕ್ಕೆ ಹೆಸರು ವಾಸಿಯಾಗಿರುವ ಹಾಸನ ಜಿಲ್ಲೆಗೆ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುವ ಸಲುವಾಗಿ ಬಜೆಟ್ ನಲ್ಲಿ ಅನುದಾನ ಬಿಡುಗಡೆ ಮಾಡುವ ನಿರೀಕ್ಷೆ ಸುಳ್ಳಾಗಿದೆ.

ತೋಟಗಾರಿಕೆ ಯೂನಿವರ್ಸಿಟಿ ತೆರೆದು ಕೃಷಿ ಹಾಗೂ ತೋಟಗಾರಿಕೆಗೆ ನೆರವಾಗುವ ಭಾವನೆ ಇತ್ತು. ಜೊತೆಗೆ ವಿಮಾನ ನಿಲ್ದಾಣಕ್ಕೆ ಕೂಡ ಯಾವುದೇ ಅನುದಾನ ನೀಡಿಲ್ಲ.

ಹಾಸನ ನಗರದ ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಅಗತ್ಯ ಇರುವ ಹೆಚ್ಚಿನ ಹಣವನ್ನು ಬಿಡುಗಡೆ ಮಾಡಿಲ್ಲ, ಶಿಕ್ಷಣ ಕ್ಷೇತ್ರಕ್ಕೆ ಕೂಡ ಬಜೆಟ್ ನಲ್ಲಿ ಪ್ರಾಮುಖ್ಯತೆ ನೀಡಿಲ್ಲ ಅಲ್ಲದೆ ಗ್ರಾಮೀಣ ರಸ್ತೆ, ಪಾರ್ಕ್ ಅಭಿವೃದ್ದಿ ಯಾವುದೇ ಅಭಿವೃದ್ಧಿಗೆ ಅನುದಾನ ನೀಡಿಲ್ಲ ಎಂದರು.

ಹಾಸನ ಜಿಲ್ಲೆಯ ಜನರ ನಿರೀಕ್ಷೆಗೆ ಪೂರಕವಾಗಿ ಯಾವುದೇ ರೀತಿಯ ಅನುದಾನ ನೀಡಿಲ್ಲ ರೈತರನ್ನು ಬಜೆಟ್ ನಲ್ಲಿ ಕಡೆಗಣಿಸಲಾಗಿದೆ, ಕೇವಲ ಮುಂದಿನ ಚುನಾವಣೆಗೆ ಅನುಕೂಲ ಆಗುವ ನಿಟ್ಟಿನಲ್ಲಿ ಬಜೆಟ್ ಮಂಡನೆ ಮಾಡಲಾಗಿದೆ ಎಂದು ದೂರಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *