ಸಕಲೇಶಪುರ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಬ್ಬಿನಗದ್ದೆಯಲ್ಲಿ ಶಾರದಾ ಪೂಜೆಯನ್ನು ವಿದ್ಯಾರ್ಥಿಗಳು ಭಕ್ತಿಪೂರ್ವಕವಾಗಿ ಆಚರಿಸಿದರು, ಜೊತೆಗೆ 7ನೇ ತರಗತಿಯಲ್ಲಿ ವ್ಯಾಸಂಗ ಮಾಡಿ ಮುಂದಿನ ವಿದ್ಯಾಭ್ಯಾಸಕ್ಕಾಗಿ ಬೇರೆ ಶಾಲೆಗೆ ತೆರಳಲಿರುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆಯನ್ನು ನೀಡಿದರು.

ಈ ಸಂದರ್ಭದಲ್ಲಿ 7ನೇ ತರಗತಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿ ಶಾಲೆಗೆ ಧ್ವನಿವರ್ಧಕ ಕೊಡುಗೆಯಾಗಿ ನೀಡಿದರು.

ಈ ಪೂರ್ಣ ಕಾರ್ಯಕ್ರಮದ ನಿರ್ವಹಣೆಯನ್ನು 6 ನೇ ತರಗತಿ ವಿದ್ಯಾರ್ಥಿಗಳೇ ನಿರ್ವಹಿಸಿದ್ದು ವಿಶೇಷವಾಗಿತ್ತು.

ಈ ಕಾರ್ಯಕ್ರಮದಲ್ಲಿ SDMC ಅಧ್ಯಕ್ಷರಾದ ಸಂತೋಷ್ ಕಬ್ಬಿನಗದ್ದೆ, ಮುಖ್ಯ ಉಪಾಧ್ಯಯಿನಿ ಹೇಮಲತಾ, ಶಿಕ್ಷಕಿಯರಾದ ಮಂಜುಳಾ, ಖೈಸರ್ ಜಹಾನ್, ಶಿಕ್ಷಕರಾದ ಅರುಣ್, SDMC ಸದಸ್ಯರಾದ ಮಂಜುನಾಥ್ ಕಬ್ಬಿನಗದ್ದೆ, & ಇತರರು ಭಾಗವಹಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *