ಸಕಲೇಶಪುರ : ತಾಲೂಕು ಯಸಳೂರು ಗ್ರಾಮದ ಶ್ರೀ ತೆಂಕಲಗೂಡು ಬೃಹನ್ಮಠದಲ್ಲಿ ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ವೀರಸಿಂಹಾಸನಾದೀಶ್ವರ ಶ್ರೀ ಶ್ರೀ ಶ್ರೀ 108ನೇ ಜಗದ್ಗುರು ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾಪದರ ದಿವ್ಯ ಸಾನಿಧ್ಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಾಗ್ಭೂಷಣ ರತ್ನ ಲಿಂ. ಶ್ರೀ ಷ|| ಬ್ರ|| ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಗಳವರ ಮೂರನೇ ವರ್ಷದ ಪುಣ್ಯಸ್ಮರಣೋತ್ಸವ ನಿಮಿತ್ಯ ಶ್ರೀ ಷ|| ಬ್ರ|| ಚನ್ನಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳವರ ಸಂಕಲ್ಪದಂತೆ ದಿನಾಂಕ 28-03-2024 ಮತ್ತು 29-03-2024 ರಂದು ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಈ ಒಂದು ಕಾರ್ಯಕ್ರಮ ನಿಮಿತ್ತ ಶ್ರೀ ಚನ್ನ ಸಿದ್ದೇಶ್ವರ ಶಿವಾಚಾರ್ಯ ಸ್ವಾಮಿಗಳು ಇಂದು ಹಾಸನದ ಹಿಮ್ಸ್ ಆಸ್ಪತ್ರೆಯ ನಿರ್ದೇಶಕರಾದ ಡಾ. ಸಂತೋಷ್ ಎಸ್.ವಿ ರವರಿಗೆ ಆಹ್ವಾನ ಪತ್ರ ನೀಡಿದರು

ಈ ಒಂದು ಸಂಧರ್ಭದಲ್ಲಿ ಜಿಲ್ಲಾ ವೈದ್ಯಾಧಿಕಾರಿ ಡಾ. ಲೋಕೇಶ್ ನಿವೃತ್ತ ಬ್ಯಾಂಕ್ ನೌಕರರಾದ ಪರಮಶಿವಯ್ಯನವರು ನಿಟ್ಟೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಚಂದ್ರಶೇಖರ್ ಹಾಗೂ ವೀರಶೈವ ಸಮಾಜದ ಖಂಡರುಗಳಾದ ನಟರಾಜ್, ಶೋಬನ್ ಬಾಬು ಅವಿನಾಶ್ ಜಿ.ಎಸ್, ದರ್ಶನ್ ಮಲ್ನಾಡ್ ಉಪಸ್ಥಿತರಿದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *