
ಸಕಲೇಶಪುರ : ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈಗಾಗಲೇ ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದು ಮತದಾರರನ್ನು ಓಲೈಸಲು ಇನ್ನಿಲ್ಲದ ಶ್ರಮ ಪಡುತ್ತಿದೆ. ನಿನ್ನೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಿ ಅಬ್ಬರದ ಪ್ರಚಾರ ಕೈಗೊಂಡಿದ್ದರು.
ಸಕಲೇಶಪುರದಲ್ಲಿ ಆಯೋಜಿಸಲಾಗಿರುವ ರೋಡ್ ಶೋದಲ್ಲಿ ಮೈತ್ರಿ ಅಭ್ಯರ್ಥಿ ಪರ ಮತಯಾಚನೆ ಮಾಡಲಿದ್ದು, ಮಧ್ಯಾಹ್ನ 2.30 ಕ್ಕೆ ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಹಳೇ ಬಸ್ ನಿಲ್ದಾಣದವರೆಗೂ ರೋಡ್ ಶೋ ನಡೆಯಲಿದೆ.
ಈ ರೋಡ್ ಶೋ ಮೂಲಕ ಪ್ರಜ್ವಲ್ರೇವಣ್ಣ ಪರ ಬಿ.ವೈ.ವಿಜಯೇಂದ್ರ ಪ್ರಚಾರ ಮಾಡಲಿದ್ದಾರೆ.
