
ಸಕಲೇಶಪುರ : ಜನ ಪ್ರತಿನಿದಿಗಳು ಹಾಗೂ ಅಧಿಕಾರಿಗಳು ಮೂಲಭೂತ ಸಮಸ್ಯೆಗಳನ್ನು ಬಗೆಹರಿಸದ ಹಿನ್ನಲೆಯಲ್ಲಿ ಲೋಕ ಸಭಾ ಚುನಾವಣೆಯನ್ನು ಭಹಿಷ್ಕರಿಸುತ್ತಿರುವುದಾಗಿ ಹೆತ್ತೂರು ಗ್ರಾಮ ಪಂಚಾಯಿತಿ ಅದ್ಯಕ್ಷ ನಾಗರಾಜು ತಿಳಿಸಿದ್ದಾರೆ.
ಸ್ವಾತಂತ್ರ್ಯ ಬಂದು ಸುಮಾರು 70 ವರ್ಷಗಳು ಕಳೆದರು ಕೂಡ ತಾಲೂಕಿನ ಹೆತ್ತೂರು ಹೋಬಳಿಯ ಕೆಳ್ಳಹಾಡ್ಯ ,ದಿಣೆಕೇರಹಳ್ಳಿ ,ಕೊಂಡದಗದ್ದೆ ,ಹಳ್ಳಿಬಯಲು ಗ್ರಾಮಗಳಲ್ಲಿ ಕುಡಿಯುವ ನೀರು ,ರಸ್ತೆ ,ಚರಂಡಿ ಈಗೆ ಇನ್ನೂ ಅನೇಕ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗದ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಬೇಜವಾಬ್ದಾರಿ ವರ್ತನೆಯನ್ನು ಖಂಡಿಸಿ ಈ ಮೇಲ್ಕಂಡ ಗ್ರಾಮಗಳ ಸುಮಾರು 400 ಕ್ಕೂ ಹೆಚ್ಚು ಮತದಾರರು ಚುನಾವಣೆಯನ್ನು ಬಹಿಷ್ಕಾರ ಮಾಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.




