
ಸಕಲೇಶಪುರ : ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ ಇಂದು ನಗರ ವ್ಯಾಪ್ತಿಯಲ್ಲಿ ಹಾಸನ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಭರ್ಜರಿ ಮತಯಾಚನೆ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರವಾದ ಘೋಷಣೆಗಳನ್ನು ಕೂಗುತ್ತಾ ಮತದಾರರಿಗೆ ಕರಪತ್ರ ಹಂಚಿ ಮತಯಾಚನೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಕಲೇಶಪುರದ ಪ್ರಮುಖ ಮುಖಂಡರು,ಯುವ ಘಟಕದ ಅಧ್ಯಕ್ಷರು ಸದಸ್ಯರು, ಎಲ್ಲಾ ಘಟಕದ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರುಗಳು ಹಾಗೂ ಮಹಿಳಾ ಘಟಕದ ಸದಸ್ಯರುಗಳು ಇದ್ದರು.



