
ಹಾಸನ: ಮಕ್ಕಳಿಗೆ ಮೊಬೈಲ್ ಬಳಕೆ ಹೆಚ್ಚಿಗೆ ಕೊಡದೇ ಚಿಕ್ಕ ವಯಸ್ಸಿನಿಂದಲೇ ಒಳ್ಳೆಯ ಸಂಸ್ಕೃತಿ ನೀಡುವ ಮೂಲಕ ಮುಂದಿನ ಭವಿಷ್ಯ ಉಜ್ವಲವಾಗಿ ಮಾಡುವ ಜವಬ್ಧಾರಿ ಅಪ್ಪ ಅಮ್ಮನ ಮೇಲಿದೆ. ಮುಂದಿನ ದಿನಗಳಲ್ಲಿ ಪ್ರತಿ ವಾರ್ಡ್ನಲ್ಲಿರುವ ಪಾರ್ಕ್ ಅಭಿವೃದ್ಧಿ ಮಾಡಲಾಗುವುದು. ಇನ್ನು ಕಸವನ್ನು ಎಲ್ಲೆಂದರಲ್ಲಿ ಹಾಕದೇ ಕಸ ವಿಲೇವಾರಿ ಮಾಡುವ ಅಫೆ ವಾಹನಕ್ಕೆ ಹಾಕುವಂತೆ ಕ್ಷೇತ್ರದ ಶಾಸಕ ಹೆಚ್.ಪಿ. ಸ್ವರೂಪ್ ಪ್ರಕಾಶ್ ಅವರು ಮನವಿ ಮಾಡಿದರು.
ನಗರದ ಶ್ರೀ ಸಂಗಮೇಶ್ವರ ಬಡಾವಣೆ ಶ್ರೀ ಜವೇನಹಳ್ಳಿ ಕೆರೆ ಬಳಿ ಇರುವ ಹಿರಿಯ ನಾಗರೀಕರ ಸಭಾಂಗಣದಲ್ಲಿ ಮೈ ಲಿಟ್ಲು ವರ್ಲ್ಡ್ ಫ್ರೀ ಶಾಲೆಯವತಿಯಿಂದ ಶನಿವಾರದಂದು ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಅಪ್ಪಂದಿರ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ವಯಕ್ತಿಕವಾಗಿ ನಾನು ಕೂಡ ಮಗನ ಜೊತೆ ಹೆಚ್ಚು ಕಾಲ ಕಳೆಯಲು ಇಷ್ಟಪಟ್ಟರೂ ಕೂಡ ಆಗತ್ತಿಲ್ಲ. ಅಪಪ್ ಆದವರು ಮಕ್ಕಳ ಜೊತೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕು. ಇಲ್ಲವಾದರೇ ದಾರಿ ತಪ್ಪುವ ಬಗ್ಗೆ ಟಿವಿ ಮಾಧ್ಯಮದಲ್ಲಿ ನೋಡುತ್ತಿದ್ದೇವೆ. ಬಹಳಷ್ಟು ಸಮಯ ಮಕ್ಕಳಲ್ಲಿ ಬೆರೆಯುವ ಮೂಲಕ ಹಾಗೂ ಚಿಕ್ಕ ವಯಸ್ಸಿನಿಂದಲೇ ಉತ್ತಮ ಸಂಸ್ಕೃತಿ ಹೇಳಿ ಕೊಡುವುದು ನಮ್ಮ ಕರ್ತವ್ಯವಾಗಿದೆ ಎಂದರು.
ಶಾಲೆಯಿಂದಲೇ ಮಕ್ಕಳು ಮನೆಗೆ ಬರುತ್ತಿದ್ದಂತೆ ಮೊಬೈಲ್ ನಲ್ಲಿ ಬರುವ ಯುಟೂಬ್, ಗೇಮ್ಸ್ ನೋಡುವುದನ್ನು ಮಕ್ಕಳು ಮೈಗೂಡಿಸಿಕೊಂಡಿದ್ದು, ಇದರಿಂದ ಹಾನಿಯೇ ಹೆಚ್ಚಿದೆ. ಹಿಂದಿನ ಕಲದಲ್ಲಿ ಮಕ್ಕಳು ಮನೆಗೆ ಬಂದ ಕೂಡಲೇ ಖಾಲಿ ಜಾಗ ಇಲ್ಲವೇ ಪಾರ್ಕ್ಗಳಲ್ಲಿ ಆಟವಾಡುತ್ತಿದ್ದರು. ಈಗ ಪಾರ್ಕ್ ಜಾಗವನ್ನೆಲ್ಲಾ ಮುಚ್ಚಿ ಲೇಔಟ್ ಗಳನ್ನು ಕಾಣುತ್ತಿದ್ದೇವೆ. ಮಕ್ಕಳ ಶಾಲೆಯಿಂದ ಬಂದ ತಕ್ಷಣ ಯಾವುದಾದರೂ ಒಂದು ಕ್ರೀಡೆಯನ್ನು ಕಲಿಸುವುದು ಮುಖ್ಯ ಎಂದು ಕಿವಿಮಾಶು ಹೇಳಿದರು.
ಮಕ್ಕಳನ್ನು ಸೂಕ್ಷ್ಮವಾಗಿ ನೋಡಿಕೊಂಡು ಬೆಳೆಸಬೇಕು. ಮದರ್ಸ್ ಡೇ, ಫಾದರ್ಸ್ ಡೇಯಂತಹ ಹಲವಾರು ಕಾರ್ಯಕ್ರಮವನ್ನು ಮಾಡುವ ಮೂಲಕ ಈ ಶಾಲೆ ದೊಡ್ಡ ಮಟ್ಟದಲ್ಲಿ ಬೆಳೆಯಲಿ ಎಂದು ಹಾರೈಸಿದರು.
ಎಲ್ಲಾ ಮಕ್ಕಳಿಗೂ ಉತ್ತಮ ಭವಿಷ್ಯ ಕೊಡುವ ಕೆಲಸ ಮಾಡಬೇಕು. ಹಾಸನದಲ್ಲಿರುವ ಪಾರ್ಕ್ ಅಭಿವೃದ್ಧಿಗೆ ಹೆಚ್ಚಿನ ಹೊತ್ತನ್ನು ನಾವು ಕೂಡ ಕೊಡಲಾಗುತ್ತಿದ್ದು, ಪ್ರತಿ ವಾರ್ಡ್ನಲ್ಲೂ ಪಾರ್ಕ್ ಅಭಿವೃದ್ಧಿ ಕೆಲಸ ಮಾಡಲಾಗುತ್ತಿದೆ. ಕಸ ವಿಲೇವಾರಿ ಬಗ್ಗೆ ಹೆಚ್ಚಿನ ಗಮನ ನೀಡಿ ನಗರಸಭೆಯಿಂದ ಬರುವ ವಾಹನಕ್ಕೆ ಕಸವನ್ನು ಹಾಕಬೇಕು. ಎಲ್ಲೆಂದರಲ್ಲಿ ಕಸವನ್ನು ಹಾಕವಾರದು ಎಂದು ಮನವಿ ಮಾಡಿದರು.
ಇನ್ನು ಪ್ಲಾಸ್ಟಿಕ್ ಬಳಕೆ ಮಾಡುವುದನ್ನು ಆದಷ್ಟು ಕಡಿಮೆ ಮಾಡಿ ಹಾಸನದ ಸ್ವಚ್ಛತೆ ಬಗ್ಗೆ ಎಲ್ಲಾರು ಸಹಕಾರ ಕೊಡಬೇಕು ಎಂದು ಕೋರಿದರು.
ಶಿಕ್ಷಕಿ ಹಾಗೂ ವಾಗ್ಮಿಗಳಾದ ರಾಧ ವೆಂಕಟೇಶ್ ಮಾತನಾಡಿ, ಇವತ್ತು ತಂದೆಯ ದಿವಸವಾಗಿದ್ದು, ಮಕ್ಕಳ ಬಗ್ಗೆ ತಂದೆಯಾದವರು ನಿಗಾವಹಿಸಿ ಸಮಾಜದಲ್ಲಿ ಉತ್ತಮ ಪ್ರಜೆಯನ್ನಾಗಿ ಮಾಡುತ್ತಿದ್ದಾರೆ. ಆಕಾಶದತ್ತ ಎತ್ತರಕ್ಕೆ ಮಾಡುವ ಕೆಲಸ ಮಾಡುತ್ತಾರೆ. ಮಕ್ಕಳ ಭವಿಷ್ಯಕ್ಕೆ ತಂದೆ ತಾಯಿ ಇಬ್ಬರ ಪಾತ್ರವು ಅಷ್ಟೆ ಮುಖ್ಯವಾಗಿರುತ್ತದೆ ಎಂದ ಅವರು ಇದೆ ವೇಳೆ ಅಪ್ಪಂದಿರ ದಿನದ ಶುಭಾಶಯ ಕೋರಿದರು.
ಮೈ ಲಿಟ್ಲು ವರ್ಲ್ಡ್ ಫ್ರೀ ಶಾಲೆಯ ಮುಖ್ಯಸ್ಥರು ಹಾಗೂ ನಗರಸಭೆ ಸದಸ್ಯೆ ಅಶ್ವಿನಿ ಮಹೇಶ್ ಮಾತನಾಡಿ, ತಂದೆ ಎಂದರೇ ಮಕ್ಕಳ ಪ್ರತಿ ನೋವು ಸಂತೋಷವನ್ನು ಗಮನಿಸುತ್ತಾ ತಾನು ಉಪವಾಸ ಇದ್ದರೂ ಮಗುವನ್ನು ಉಪವಾಸ ಇಡುವುದಿಲ್ಲ. ಕುಟುಂಬದ ಜವಬ್ಧಾರಿ ಹೆಗಲ ಮೇಲಿದ್ದರೂ ಎಲ್ಲಾವನ್ನು ಒಂದು ಬದಿ ಇಟ್ಟು ಮುಗುಳ್ನಗೆ ಮೂಲಕ ಎಲ್ಲಾರನ್ನು ನಗಿಸುತ್ತಾನೆ. ಮಕ್ಕಳಿಗೆ ಯಾರೆ ಕೇಳಿದರೂ ಅಪ್ಪನನ್ನೆ ನಾಯಕನೆಂದು ಕರೆಯುವುದು ಸಾಮಾನ್ಯವಾಗಿದೆ ಎಂದು ಎಲ್ಲಾರಿಗೂ ಅಪ್ಪಂದಿರ ದಿನಜದ ಶುಭಾಶಯಗಳನ್ನು ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರಸಭೆ ಮಾಜಿ ಸದಸ್ಯರಾದ ಮಹೇಶ್ ಇತರರು ಉಪಸ್ಥಿತರಿದ್ದರು.


