
ಹಾಸನ : ನಗರದ ಹೊಯ್ಸಳನಗರ ಬಡಾವಣೆ ಯಲ್ಲಿ ಹಾಡುಹಗಲೇ ಗುಂಡಿಕ್ಕಿ ಇಬ್ಬರನ್ನು ಹತ್ಯೆ ಮಾಡಲಾಗಿದ್ದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಹೊಯ್ಸಳ ನಗರದ ಮುಖ್ಯ ರಸ್ತೆಯಲ್ಲಿಯೇ ನಿಸ್ಸಾನ್ ಟರಾನೋ ಕಾರ್ ನಿಂತಿದ್ದು ಅದರ ಎದುರಿನಲ್ಲಿ ಗುಂಡಿನ ದಾಳಿಯಿಂದ ಮೃತಪಟ್ಟ ಇಬ್ಬರ ಶವಗಳು ಬಿದ್ದಿದೆ
ಘಟನಾ ಸ್ಥಳಕ್ಕೆ ಎಸ್ಪಿ ಮೊಹಮ್ಮದ್ ಸುಜೀತಾ ಆಗಮಿಸಿದ್ದು ಸ್ಥಳದಲ್ಲಿ ಬೆರಳಚ್ಚು ತಜ್ಞರು ಹಾಗು ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಪರಿಶೀಲನೆ ನಡೆಸುತ್ತಿದ್ದಾರೆ.
ಆಸ್ತಿ ವಿಚಾರದಲ್ಲಿ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
