ಸಕಲೇಶಪುರ : ಕಾಫಿ ಬೆಳೆಗಾರರು ಪರಿಸರವನ್ನು ಉಳಿಸುವ ಕೆಲಸವನ್ನು ಮಾಡಿಕೊಂಡು ಬಂದಿದ್ದಾರೆ. ರಾಜ್ಯದಲ್ಲಿಯೇ ಹೆಚ್ಚು ಸಂಕಷ್ಟದಲ್ಲಿರುವ ಬೆಳೆಗಾರರೆಂದರೆ ಅದು ಕಾಫಿ ಬೆಳೆಗಾರರು.
ಈ ಬಾರಿಯ ಅತಿ ಹೆಚ್ಚು ಮಳೆಯಿಂದಾಗಿ ಕಾಫಿ ಹಾನಿಗೊಳಗಾಗಿರುವುದು ನನ್ನ ಗಮನಕ್ಕೆ ಬಂದಿದೆ.
ಇದರ ಬಗ್ಗೆ ಸದನದಲ್ಲಿ ಚರ್ಚಿಸುವ ಮೂಲಕ ಸರ್ಕಾರದ ಗಮನವನ್ನು ಸೆಳೆದು ಪರಿಹಾರ ಕೊಡಿಸುವ ಕೆಲಸಕ್ಕೆ ಮುಂದಾಗುತ್ತೇನೆ. ಎಂದು ಕರ್ನಾಟಕ ರಾಜ್ಯ ಸರ್ಕಾರದ ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಹೇಳಿದರು.