ಸಕಲೇಶಪುರ : ಹೆತ್ತೂರು ಪಂಚಾಯಿತಿ ವ್ಯಾಪ್ತಿಯ ಗುಂಡಿಗೆರೆ ಗ್ರಾಮದ ಸಾರ್ವಜನಿಕ ಬಸ್ ಸ್ಟ್ಯಾಂಡ್ ಪರಿಸ್ಥಿತಿ, ರಸ್ತೆ ಕಾಮಗಾರಿ ಮುಗಿದು ಒಂದು ವರ್ಷ ಕಳೆದರೂ ಬಸ್ ಸ್ಟಾಂಡ್ ನ ಮುಂಭಾಗ ಮೋರಿ ನಿರ್ಮಾಣ ಮಾಡದೆ ಶಾಲಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪರದಾಡುವ ಪರಿಸ್ಥಿತಿ, ಅದೂ ಸಾಲದೆ ಜೆ ಜೆ ಎಂ ಯೋಜನೆಯಡಿ ಕುಡಿಯುವ ನೀರಿಗಾಗಿ ಬಸ್ ಸ್ಟ್ಯಾಂಡ್ ಪಕ್ಕದಲ್ಲಿ ಬೋರ್ವೆಲ್ ಹಾಗೂ 5 ಅಡಿ, ಚರಂಡಿಯನ್ನು ತೆಗೆದು ವ್ಯವಸ್ಥಿತವಾಗಿ ಮುಚ್ಚದೆ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ,

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳನ್ನು ಸತತ ಎರಡು ತಿಂಗಳಿಂದ ಸಂಪರ್ಕಿಸಿದರೂ ಕೆಲಸ ಮಾಡಿಸುವ ಉತ್ತರವನ್ನು ನೀಡುತ್ತಿರುತ್ತಾರೆ, ಪರ್ಯಾಯ ವ್ಯವಸ್ಥೆಯಾಗಿ ಗ್ರಾಮಸ್ಥರೇ ತಾತ್ಕಾಲಿಕವಾಗಿ ಸಿಮೆಂಟ್ ಮೋರಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ, ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕು ಎಂದು ಉದಯ್ ಆಗ್ರಹಿಸಿದ್ದಾರೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *