ಸಕಲೇಶಪುರ : ಇಂದು ಕಸಬಾ ವಲಯದ ಸಕಲೇಶಪುರ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ಹೇಮಾವತಿ ನದಿಯ ಪ್ರವಾಹ ಪೀಡಿತ ಪ್ರದೇಶವಾದ ಅಜಾದ್ ರೋಡ್ ನಲ್ಲಿ ವಿಪತ್ತು ನಿರ್ವಹಣಾ ಘಟಕದ ಎಲ್ಲ ಯೋಧರು ಸಾರ್ವಜನಿಕರಿಗೆ ನೆರವನ್ನು ಒದಗಿಸಿದರು…
ಹಾಗೂ ಮುಂದೆ ಆಗುವಂತಹ ಅನಾಹುತಗಳಿಗೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ವಿವರಿಸಿ ಹಾಗೂ ಸಾರ್ವಜನಿಕರೊಂದಿಗೆ ಯಾವುದೇ ಕ್ಷಣದಲ್ಲಾದರೂ ನಿಮ್ಮೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ನಾವಿದ್ದೇವೆ ಎನ್ನುವ ಭರವಸೆಯನ್ನು ಮೂಡಿಸಿದರು.