ಸಕಲೇಶಪುರ : ಅತಿಯಾದ ಮಳೆಯಿಂದ ತಾಲೂಕಿನ ದೊಡ್ಡತಪ್ಪಲು ಬಳಿ ಪುನಃ ಭೂ ಕುಸಿತಸಂಭವಿಸಿದ್ದು, ಹಲವು ವಾಹನಗಳು ಮಣ್ಣಿನಡಿ ಸಿಲುಕಿವೆ.

ಈ ಹಿಂದೆ ಎರಡು ಕಾರು ಒಂದು ಟ್ಯಾಂಕರ್ ಸೇರಿ ಆರು ವಾಹನಗಳು ಮಣ್ಣನಡಿ ಸಿಲುಕಿಕೊಮಡಿದ್ದವು ಇದೀಗ ಮತ್ತೆ ಸತತ ಮಳೆಯಿಂದ ದೊಡ್ಡತಪ್ಪಲು ಬಳಿ ಭಾರೀ ಪ್ರಮಾಣದ ಭೂ ಕುಸಿತ ಸಂಭವಿಸಿದೆ.

ಈ ಪ್ರದೇಶದಲ್ಲಿ ಕಳೆದ ಹದಿನೈದು ದಿನಗಳಿಂದ ಮಣ್ಣು ಕುಸಿಯುತ್ತಿದೆ. ಇಂದು ಕಂದಾಯ ಸಚಿವ ರು ವೀಕ್ಷಣೆ ಮಾಡಿದ ಬೆನ್ನಲ್ಲೆ ಮತ್ತೆ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಸಂಚರಿಸುತ್ತಿದ್ದವರು ಅದರಡಿ ಸಿಲುಕಿದ್ದಾರೆ.

ಸದ್ಯ ರಕ್ಷಣಾ ಕಾರ್ಯಾಚರಣೆ . ರಕ್ಷಣಾ ಸಿಬ್ಬಂದಿ ಜೆಸಿಬಿ ಮೂಲಕ‌ ಮಣ್ಣು ತೆರವು ಮಾಡುತ್ತಿದ್ದಾರೆ.

ಮತ್ತಷ್ಟು ಮಣ್ಣು ಕುಸಿದರೆ ದೊಡ್ಡ ಅನಾಹುತವೇ ಸಂಭವಿಸುವ ಭೀತಿ ಎದುರಾಗಿದೆ.

ಸಮರೋಪಾದಿಯಲ್ಲಿ ಮಣ್ಣು ತೆರವು ಮಾಡಲು ಪ್ರಯತ್ನಿಸಲಾಗುತ್ತಿದೆ ಎಂದು ರಾಷ್ಟ್ರೀಯ ಹೆದ್ದಾರಿ,ತಾಲೂಕು ಆಡಳಿತ, ಪೊಲೀಸ್ ಇಲಾಖೆಯ ಮೂಲಗಳಿಂದ ತಿಳಿದು ಬಂದಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *