ಸಕಲೇಶಪುರ : ಕಾಫಿ ಮಂಡಳಿಯ ಚೇರ್ಮನ್ ಎಂ ಜೆ ದಿನೇಶ್ ರವರು ಹಾಗೂ ಕಾಫಿ ಮಂಡಳಿಯ ಸದಸ್ಯರಾದ ಎನ್ ಬಿ ಉದಯ್ ಕುಮಾರ್ ರವರ ನೇತೃತ್ವದಲ್ಲಿ ಕಾಫಿ ಮಂಡಳಿಯ ಅಧಿಕಾರಿಗಳು, ಬೆಳಗಾರ ಸಂಘಟನೆಗಳ ಪದಾಧಿಕಾರಿಗಳನ್ನು ಒಳಗೊಂಡಂತೆ ಇಂದು ಸಕಲೇಶಪುರ ತಾಲೂಕು ಕಸಬಾ ಹೋಬಳಿ ವ್ಯಾಪ್ತಿಯ ಕಾಫಿ ತೋಟಗಳಿಗೆ ಭೇಟಿ ನೀಡಿ ಅತಿವೃಷ್ಟಿಯಿಂದ ಕಾಫಿ ತೋಟಗಳಲ್ಲಿ ಉಂಟಾಗಿರುವ ನಷ್ಟದ ಬಗ್ಗೆ ವೀಕ್ಷಿಸಲಾಯಿತು.

ಕಾಫಿ ಮಂಡಳಿಯ ಮುಖೇನ ನಷ್ಟದ ಬಗ್ಗೆ ಸರ್ಕಾರಕ್ಕೆ ವರದಿ ನೀಡುವ ಸಲುವಾಗಿ ತೋಟ ವೀಕ್ಷಣೆ ನಡೆಸಲಾಗುತ್ತಿದೆ.

ಈ ಸಂದರ್ಭದಲ್ಲಿ ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘದ ಪದಾಧಿಕಾರಿಗಳು, ಕಸಬಾ ಹೋಬಳಿ ಬೆಳಗಾರರ ಸಂಘದ ಪದಾಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಬೆಳಗಾರ ಸಂಘಟನೆಗಳ ಪದಾಧಿಕಾರಿಗಳು ಜೊತೆಗಿದ್ದುಕೊಂಡು ಅತಿವೃಷ್ಟಿಯಿಂದ ಉಂಟಾಗಿರುವ ನಷ್ಟದ ಬಗ್ಗೆ ಮಾಹಿತಿ ನೀಡಿರುತ್ತಾರೆ.

ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘ, ಕಸಬಾ ಹೋಬಳಿ ಬೆಳಗಾರರ ಸಂಘ ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿ ಬೆಳಗಾರ ಸಂಘಗಳು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *