
ದೆಹಲಿ : ಬಹುದಿನಗಳ ಕಾಲ ಹಾಸನ ಜಿಲ್ಲೆಗೆ ಐಐಟಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದರೂ ಕೂಡ ಪ್ರಯೋಜನಾಗಿಲ್ಲ ,ಹಾಸನ ಜಿಲ್ಲೆಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ಬೇಡಿಕೆಯನ್ನು ಮಾಡುತ್ತಿದ್ದು ಇದೀಗ ನೂತನವಾಗಿ ಆಯ್ಕೆಯಾದ ಹಾಸನ ಜಿಲ್ಲಾ ಸಂಸದರಾದ ಶ್ರೇಯಸ್ ಎಂ ಪಟೇಲ್ ಅವರು ಇಂದು ದೆಹಲಿಯಲ್ಲಿ ಶಿಕ್ಷಣ ಸಚಿವರಾದ ಧರ್ಮೇಂದ್ರ ಪ್ರದಾನ್ ಅವರನ್ನು ಬೇಟಿ ಮಾಡಿ ಹಾಸನಕ್ಕೆ ಐಐಟಿ ಮಂಜೂರು ಮಾಡುವಂತೆ ಮನವಿ ಪತ್ರ ಸಲ್ಲಿಸಿದರು.
