
ಸಕಲೇಶಪುರ : ಹಿಂದೂ ಹಿತರಕ್ಷಣಾ ಸಮಿತಿ ಸಕಲೇಶಪುರ ತಾಲ್ಲೂಕು ಇವರ ವತಿಯಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಬಾಂಗ್ಲಾದೇಶದಲ್ಲಿರುವ ಹಿಂದುಗಳ ಮೇಲಿನ ದೌರ್ಜನ್ಯ ಖಂಡಿಸಿ ಅವರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕಾಗಿ ಆಗ್ರಹಿಸಿ, ಜನ ಜಾಗೃತಿಗೋಸ್ಕರ ” ನಗರದ ಹಳೇ ಬಸ್ ನಿಲ್ದಾಣದ ಹತ್ತಿರ ಮಾನವ ಸರಪಳಿ ಮಾಡುವ ಮೂಲಕ ಪ್ರತಿಭಟನೆ ಮಾಡಲಾಯಿತು.
ಇದಕ್ಕೂ ಮುನ್ನ ಸಕಲೇಶ್ವರ ಸ್ವಾಮಿ ದೇವಸ್ಥಾನದಿಂದ ನಗರದ ಹಳೇ ಬಸ್ ನಿಲ್ದಾಣದ ವರೆಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುನಾಥ್, ಬಿ ಜೆ ಪಿ ತಾಲ್ಲೂಕು ಅಧ್ಯಕ್ಷ ಅಶ್ವಥ್, ಮಾಜಿ ಅಧ್ಯಕ್ಷ ಮಂಜುನಾಥ ಸಂಘ್ವಿ, R SS ಮುಖಂಡರುಗಳಾದ ಸತ್ಯನಾರಾಯಣ ಗುಪ್ತ, ನಂದನ್, ರವಿ ಆಟೋ, ಪೃಥ್ವಿ, ಮಾಜಿ ಬಜರಂಗದಳದ ಸಂಯೋಜಕ ವಿಜಿ ಕುಮಾರ್, ಪುರಸಭಾ ಸದಸ್ಯರಾದ ವನಜಾಕ್ಷಿ ಮಾಜಿ ಸದಸ್ಯ ಮೋಹನ್ ಹಾಗೂ ಇತರರು ಉಪಸ್ಥಿತರಿದ್ದರು.






