
ಸಕಲೇಶಪುರ :- ತಾಲ್ಲೂಕು ಶುಕ್ರವಾರಸಂತೆಯ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಶಾಲಾ ಮಕ್ಕಳಿಗೆ ರಾಖಿ ಕಟ್ಟುವ ಮೂಲಕ ರಕ್ಷಾಬಂಧನದ ಮಹತ್ವವನ್ನು ಹಾಗೂ ಆಚರಣೆಯ ಇತಿಹಾಸವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜಿಲ್ಲಾ ಸಂಪರ್ಕ ಪ್ರಮುಖ್ ರಾದ ಕರಡಿಗಾಲ ಹರೀಶ್ ತಿಳಿಸಿಕೊಟ್ಟರು.
ಈ ಸಂದರ್ಭದಲ್ಲಿ ಶ್ರೀ ಮಂಜುನಾಥೇಶ್ವರ ವಿದ್ಯಾನಿಕೇತನ ಶಾಲೆಯ ಖಜಾಂಚಿ ರೇಣುಕ ಬಿ.ಆರ್,ಮಾಜಿ ಸೈನಿಕರು ಹಾಗೂ ರಾಷ್ಟ್ರೀಯ ಸ್ವಯಂಸೇವಕ ಸಂಘದ ತಾಲ್ಲೂಕ್ ಕಾರ್ಯನಿರ್ವಾಹಕರು ನಂದೀಶ್, ಯಡವರಳ್ಳಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಮಂಡಲ ಪ್ರಮುಖರಾದ ಚೇತನ್ ಇದ್ದರು.



