
ಹಾಸನ : ಕವಿಪ್ರನಿನಿ ಯಿಂದ ದಿನಾಂಕ 20.09.2024 ರಂದು ಕಂದಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ, ಸದರಿ ದಿನಾಂಕದಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 06:00 ಗಂಟೆ ಯವರೆಗೆ ಆಲೂರು ಟೌನ್, ಗುಡೇನಹಳ್ಳಿ, ಹುಣಸೆವಳ್ಳಿ, ಪಾಳ್ಯ, ಬೈರಾಪುರ, ಕಂದಲಿ, ಶೆಟ್ಟಿಹಳ್ಳಿ, ಶಂಕರನಹಳ್ಳಿ, ಅಗಲಹಳ್ಳಿ, ಕಣತೂರು ಮತ್ತು ಸುತ್ತಮುತ್ತಲಿನ ಗ್ರಾಮಗಳುಹಾಗೂ
ದಿನಾಂಕ 21.09.2024 ರಂದು ಮಗ್ಗೆ, ಬಾಳುಪೇಟೆ, ಸಕಲೇಶಪುರ, ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ, ಮಗ್ಗೆ, ಬಾಳ್ಳುಪೇಟೆ, ಸಕಲೇಶಪುರ ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಾಗುವ ಪ್ರದೇಶಗಳ ವಿದ್ಯುತ್ ಸ್ಥಾವರಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ.
ಕಾರ್ಯನಿರ್ವಾಹಕ ಇಂಜಿನಿಯರ್ (ವಿ),ಟಿ.ಎಲ್ ಮತ್ತು ಎಸ್.ಎಸ್ ವಿಭಾಗ, ಕವಿಪ್ರನಿನಿ, ಹಾಸನ.KPTCL
