
ಸಕಲೇಶಪುರ – ಕುಶಾಲನಗರ ಬಡಾವಣೆಯಲ್ಲಿ ಅಕ್ರಮವಾಗಿ ಕಟಾವು ಮಾಡಿ ಮಾರಾಟ ಮಾಡಲು ಸಂಗ್ರಹಿಸಿದ ಗೋಮಾಂಸ ಅಡ್ಡೆ ಮೇಲೆ ಪೋಲಿಸರ ದಾಳಿ ನಡೆಸಿದ್ದಾರೆ.
ಬಜರಂಗದಳ ಕಾರ್ಯಕರ್ತರು ನೀಡಿದ ಮಾಹಿತಿ ಆಧರಿಸಿ ನಗರ ಠಾಣೆ ವೃತ್ತ ನಿರೀಕ್ಷಕ ನೇತೃತ್ವದಲ್ಲಿ ಪೋಲಿಸರು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದು ಮನೆಯಲ್ಲಿ 250 ಕೆ.ಜಿ ಅಷ್ಟು ಗೋಮಾಂಸ ಜಪ್ತಿ ಮಾಡಲಾಗಿದೆ.
ನಗರ ಠಾಣೆಯಲ್ಲಿ ಇಬ್ಬರು ಮೇಲೆ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


