
ಸಕಲೇಶಪುರ : ಮಲೆನಾಡು ರಕ್ಷಣಾ ಸೇನೆ ವತಿಯಿಂದ ಅಕ್ರಮವಾಗಿ ಆಗಮಿಸಿರುವ ವಲಸಿಗರು ಸಕಲೇಶಪುರದ ಸಂತೆ ಮಾರುಕಟ್ಟೆಯಲ್ಲಿ ಅಂಗಡಿ ಮುಂಗಟ್ಟುಗಳನ್ನು ಹಾಕಿರುವುದನ್ನ ಖಂಡಿಸಿ ಪ್ರತಿಭಟನೆ ಮಾಡಿದ ಹಿನ್ನಲೆ
ಸಕಲೇಶಪುರದ ದಕ್ಷ ಉಪ ವಿಭಾಗಾಧಿಕಾರಿಗಳಾದ ಶ್ರುತಿ ಅವರಿಗೆ ಮನವಿಯನ್ನು ಸಲ್ಲಿಸಲಾಗಿತ್ತು
ವಿಷಯ ತಿಳಿದ ಸಂಬಂಧ ಪಟ್ಟ ಅಧಿಕಾರಿಗಳಾದ ಉಪ ವಿಭಾಗಾಧಿಕಾರಿ ಶ್ರುತಿ ಹಾಗೂ ನಗರದ ಸರ್ಕಲ್ ಇನ್ಸ್ಪೆಕ್ಟರ್ ಜಗದೀಶ್ ಅವರುಗಳ ಜಂಟಿ ಕಾರ್ಯಚರಣೆ ಯಿಂದ ಅಕ್ರಮವಾಗಿ ಅಂಗಡಿ ಮುಂಗಟ್ಟುಗಳನ್ನು ಹಾಕಿಕೊಂಡವರ ಅಂಗಡಿಗಳನ್ನು ತೆರವು ಗೊಳಿಸಿದರು







