ಹಾಸನ ಜಿದ್ದಾ ಜಿದ್ದಿನಲ್ಲಿ ಎರಡನೇ ಪಟ್ಟಿ ಬಿಡುಗಡೆ ವಿಳಂಬ:
ತೀವ್ರ ಕುತೂಹಲ ಮೂಡಿಸಿದ್ದ ಹಾಸನ ವಿಧಾನಸಭಾ ಕ್ಷೇತ್ರದ ಟಿಕೆಟ್‌ಗೆ ಸಂಬಂಧಿಸಿದಂತೆ ಪಕ್ಷದ ವರಿಷ್ಠ ನಾಯಕ ಎಚ್‌.ಡಿ.ದೇವೇಗೌಡ ಅವರ ನೇತೃತ್ವದಲ್ಲಿ ಏಪ್ರಿಲ್ 1 ರಂದು ನಡೆದ ಸಂಧಾನ ಸಭೆ ವಿಫಲವಾಗಿದೆ. ಭವಾನಿ ರೇವಣ್ಣ ಅವರಿಗೆ ಹಾಸನ ಟಿಕೆಟ್‌ ಕೈತಪ್ಪಿದೆ.

ಪದ್ಮನಾಭ ನಗರದ ಮನೆಯಲ್ಲಿ ನಡೆದ ಸಂಧಾನ ಸಭೆಯಲ್ಲಿ ಗೌಡರು ತಮ್ಮ ನಿಲುವು ವ್ಯಕ್ತಪಡಿಸಿದ ಬಳಿಕ ಆಕ್ರೋಶಗೊಂಡ ಭವಾನಿ ಮತ್ತು ಎಚ್‌.ಡಿ.ರೇವಣ್ಣ ಮುನಿಸಿಕೊಂಡು ಸಭೆಯ ಅರ್ಧದಲ್ಲೇ ಪ್ರತ್ಯೇಕವಾಗಿ ನಿರ್ಗಮಿಸಿದ್ದರು. ಕುಟುಂಬದವರಿಗೆ ಟಿಕೆಟ್‌ ಬೇಡ ಎಂಬ ಬಲವಾದ ನಿಲುವು ವ್ಯಕ್ತಪಡಿಸಿದ್ದ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರ ಮಾತಿಗೇ ದೇವೇಗೌಡರು ಸಹಮತ ವ್ಯಕ್ತಪಡಿಸಿದ್ದರು.

ಈ ಬೆಳವಣಿಗೆ ಹಿನ್ನೆಲೆಯಲ್ಲಿ ಸೋಮವಾರ ಜೆಡಿಎಸ್‌ನ ಎರಡನೇ ಪಟ್ಟಿ ಪ್ರಕಟಗೊಳ್ಳುವುದೇ? ಒಂದು ವೇಳೆ ಪ್ರಕಟಗೊಂಡರೂ ಅದರಲ್ಲಿ ಹಾಸನ ಕ್ಷೇತ್ರದ ಅಭ್ಯರ್ಥಿ ಹೆಸರು ಇರಲಿದೆಯೇ ಎಂಬುದು ಕುತೂಹಲಕರ ಮೂಡಿತ್ತು. ಕೊನೆಗೂ ಜೆಡಿಎಸ್‌ನ ಎರಡನೇ ಪಟ್ಟಿಪ್ರಕಟ ವಿಳಂಬವಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *