
ಮುರುಡೇಶ್ವರ : ಕಡಲ ತೀರದಲ್ಲಿ ಈಜಲು ಹೋಗಿದ್ದ ಶಾಲಾ ವಿದ್ಯಾರ್ಥಿನಿಯರು ನೀರು ಪಾಲಾಗಿರುವ ಘಟನೆ ಮುರುಡೇಶ್ವರದಲ್ಲಿ ನಡೆದಿದೆ.
7 ವಿದ್ಯಾರ್ಥಿನಿಯರು ಸಮುದ್ರದಲ್ಲಿ ಈಜುವಾಗ ಅಲೆಗೆ ಸಿಲುಕಿ ಮುಳುಗಿ ಹೋಗಿದ್ದಾರೆ. ದುರಂತದಲ್ಲಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಇನ್ನೂ ಮೂರು ವಿದ್ಯಾರ್ಥಿನಿಯರ ರಕ್ಷಿಸಲು ಶೋಧ ಕಾರ್ಯ ಮುಂದುವರಿದಿದೆ.
ಕೋಲಾರ ಜಿಲ್ಲೆ ಮುಳಬಾಗಿಲಿನ ಕೊತ್ತೂರು ಮೋರಾರ್ಜಿ ದೇಸಾಯಿ ವಸತಿ ಶಾಲೆಯ 54 ವಿದ್ಯಾರ್ಥಿನಿಯರು, 6 ಮಂದಿ ಶಿಕ್ಷಕರ ಜೊತೆ ಪ್ರವಾಸಕ್ಕೆಂದು ಭಟ್ಕಳ ತಾಲೂಕಿನ ಮುರುಡೇಶ್ವರಕ್ಕೆ ತೆರಳಿದ್ದರು.
ಕಡಲ ತೀರದಲ್ಲಿ ವಿದ್ಯಾರ್ಥಿನಿಯರು ಈಜಲು ಹೋದಾಗ ಈ ಅನಾಹುತ ಸಂಭವಿಸಿದೆ
