ಹೈದ್ರಾಬಾದ್​​ನ ಸಂಧ್ಯಾ ಥಿಯೇಟರ್​ನಲ್ಲಿ ಕಾಲ್ತುಳಿತಕ್ಕೆ ಬಲಿಯಾಗಿದ್ದ ಮಹಿಳೆಯ ಪ್ರಕರಣದಲ್ಲಿ ಅಲ್ಲು ಅರ್ಜುನ್​ ಬಂಧನವಾಗಿತ್ತು ಹಾಗೂ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೂ ಕೂಡ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಅಲ್ಲು ಅರ್ಜುನ್​ ಪರ ವಕೀಲರು ಹೈಕೋರ್ಟ್​ ಮೊರೆ ಹೋಗಿದ್ದರು. ಸದ್ಯ ವಾದ ವಿವಾದಗಳನ್ನು ಆಲಿಸಿದ ಹೈಕೋರ್ಟ್​ ಮಧ್ಯಂತರ ಜಾಮೀನನ್ನು ನೀಡಿದೆ

ಹೈಕೋರ್ಟ್​ನಲ್ಲಿ ವಾದ ಮಾಡಿದ ಅಲ್ಲು ಅರ್ಜುನ್ ಅವರ ವಕೀಲರು ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ಪಾತ್ರವಿಲ್ಲ. ಉದ್ದೇಶಪೂರ್ವಕವಾಗಿ ನಡೆದಂತಹ ಸಾವು ಇದಲ್ಲ ಎಂದು ಹೇಳಿದ್ದಾರೆ. ಈ ಹಿಂದೆ ಗುಜರಾತ್​​ನ ಬರೋಡಾದಲ್ಲಿ ಬಾಲಿವುಡ್ ಆ್ಯಕ್ಟರ್ ಶಾರುಖ್​ ಖಾನ್ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹಾಗೂ ಅವರಿಗೆ ಸಿಕ್ಕ ಜಾಮೀನಿನ ವಿಚಾರವನ್ನು ಹೈಕೋರ್ಟ್​ಗೆ ನೆನಪಿಸಿದ ವಕೀಲರು ಆ ಕೇಸ್​ನಂತೆ ಈ ಪ್ರಕಣದಲ್ಲಿಯೂ ಕೂಡ ಆರೋಪಿಯ ಪಾತ್ರವಿಲ್ಲ ಹೀಗಾಗಿ ಈ ಪ್ರಕರಣವನ್ನು ರದ್ದು ಮಾಡಬೇಕು ಎಂದು ವಾದಿಸಿದ್ದಾರೆ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *