ಬೇಲೂರು ತಾಲ್ಲೂಕಿನ ಅರೇಹಳ್ಳಿ ಹೋಬಳಿಯ ನಾರ್ವೆಯ ಗ್ರಾಮ ಪಂಚಾಯಿತಿಯಲ್ಲಿ ಅಮೃತ ಆರೋಗ್ಯ ಅಭಿಯಾನದಡಿ ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣೆಯನ್ನು ಏರ್ಪಡಿಸಲಾಗಿತ್ತು. ರಕ್ತ ಹೀನತೆ, ಅಪೌಷ್ಠಿಕತೆ, ಮಧುಮೇಹ ರೋಗಗಳಿಗೆ ಸಂಬಂಧಿಸಿದಂತೆ ನೂರಕ್ಕೂ ಹೆಚ್ಚು ಕಾರ್ಮಿಕರು ಆರೋಗ್ಯ ತಪಾಸಣೆಗೊಳಪಟ್ಟರು. ಈ ವೇಳೆ ಡಾ. ಆಯಿಷಾ ಇಲಿಯಾಝ್, ನೋಡಲ್ ಅಧಿಕಾರಿ ಚೈತ್ರ, ಗ್ರಾ.ಪಂ ಉಪಾಧ್ಯಕ್ಷ ಮಲ್ಲಿಕಾರ್ಜುನ್, ಕಾರ್ಯದರ್ಶಿ ಚಾಮರಾಜ್, ಸೋಮಯ್ಯ, ದೇವರಾಜು, ಚಂದ್ರು, ಕೃಷ್ಣೇಗೌಡ, ನಾರಾಯಣ, ರಾಜು ಮತ್ತಿತರರು ಹಾಜರಿದ್ದರು.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *

You missed