
ಆಲೂರು : ಕಣತೂರು ಗ್ರಾಮ ಪಂಚಾಯಿತಿಯಲ್ಲಿ ವಿಶೇಷ ಚೇತನರ ಗ್ರಾಮ ಸಭೆ ನೆರವೇರಿತು
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪೃಥ್ವಿ ಜಯರಾಮ್ ಮಾತಾನಾಡಿ ವಿಕಲಚೇತನರು ಯಾವ ರೀತಿಯಲ್ಲೂ ಇತರರಿಗೆ ಕಡಿಮೆ ಸಾಮರ್ಥ ಹೊಂದಿಲ್ಲ. ವಿಕಲಚೇತನರ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಇನ್ನೂ ಹೆಚ್ಚಿನ ಸರಕಾರದ ಯೋಜನೆ ಹಾಗೂ ಸೌಲಭ್ಯವನ್ನು ಪ್ರಾಮಾಣಿಕವಾಗಿನೀಡುವುದಾಗಿ ತಿಳಿಸಿ ಸಭೆಯಲ್ಲಿ ಅಂಗವಿಕಲರಿಗೆ ಸರ್ಕಾರದಿಂದ ಸಿಗುವ ಸೌಲಭ್ಯಗಳು ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಿ, ಅಂಗವಿಕಲರಿಗೆ ಇರುವ ಸೌಲಭ್ಯಗಳ ಬಗ್ಗೆ ತಿಳಿಸಲಾಯಿತು,
ಸರ್ಕಾರವಿಶೇಷ ಚೇತನರಿಗೂ ಸಮಾನ ಅವಕಾಶ ನೀಡುತ್ತಿದೆ. ಗ್ರಾಮಮಟ್ಟದ ಅಧಿಕಾರಿ ಜವಾಬ್ದಾರಿ ವಹಿಸಿ ಕಾರ್ಯನಿರ್ವಹಿಸಿದರೆ ಮಾತ್ರ ವಿಶೇಷಚೇತನರಿಗೆ ಸವಲತ್ತುಸಿಗಲು ಸಾಧ್ಯ ಎಂದರು ಇದೇ ಸಂದರ್ಭದಲ್ಲಿ ಪಂಚಾಯಿತಿ ವ್ಯಾಪ್ತಿಯ 12 ಜನ ಪಲಾನುಭವಿಗಳಿಗೆ ಸೋಲಾರ್ ಲೈಟ್ ವಿತರಿಸಲಾಯಿತು

