ಚಿಕ್ಕಮಗಳೂರು-ಬೇಲೂರು-ಹಾಸನ ರೈಲು ಮಾರ್ಗದ ಕಾಮಗಾರಿ ಚುರುಕು ಕಂಡಿದ್ದು ಈಗಾಗಲೇ ಚಿಕ್ಕಮಗಳೂರು-ಹಾದಿಹಳ್ಳಿ ನಡುವೆ 9 ಕಿ.ಮೀ. ಮಾರ್ಗದಲ್ಲಿ ರೈಲಿನ ಪ್ರಾಯೋಗಿಕ ಮತ್ತು ವೇಗದ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಮಲೆನಾಡಿನ ಮತ್ತು ಅರೆ ಮಲೆನಾಡಿನ ಜನರ ಬಹುದಿನದ ಬೇಡಿಕೆ ಈಡೇರಿತ್ತಿರುವುದರಿಂದ ಅ ಭಾಗದ ಜನ ಸಂತಸಗೊಂಡಿದ್ದಾರೆ.

ರಾಜ್ಯ ಮತ್ತು ಕೇಂದ್ರ ಸರ್ಕಾರ ತಲಾ ಶೇ 50ರ ವೆಚ್ಚ ಹಂಚಿಕೆ ಪಾಲುದಾರಿಕೆಯಲ್ಲಿ ಈ ಯೋಜನೆಯನ್ನು ಕೈಗೊಂಡಿವೆ. ನೈಋತ್ಯ ರೈಲ್ವೆ ವಿಭಾಗದ ಮೈಸೂರು ವಲಯಕ್ಕೆ ಈ ಮಾರ್ಗ ಸೇರುತ್ತದೆ. ಚಿಕ್ಕಮಗಳೂರು-ಹಾದಿಹಳ್ಳಿ ನಡುವೆ ರೈಲ್ವೆ ಪರೀಕ್ಷೆ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಈ ಮಾರ್ಗ ಚಿಕ್ಕಮಗಳೂರು-ಬೇಲೂರು ಹೊಸ ಬ್ರಾಡ್ ಗೇಜ್ ರೈಲು ಮಾರ್ಗದಲ್ಲಿ ಬರುತ್ತದೆ.

ಪ್ರಾದೇಶಿಕ ಸಾರಿಗೆ ಸಂಪರ್ಕಕ್ಕೆ ಇದೊಂದು ಮಹತ್ವದ ಹೆಜ್ಜೆಯಾಗಿದೆ. ಚಿಕ್ಕಮಗಳೂರು-ಹಾಸನ ನಡುವೆ 54 ಕಿಲೋ ಮೀಟರ್ ಉದ್ದದ ರೈಲು ಮಾರ್ಗ ನಿರ್ಮಾಣದ ಯೋಜನೆಯಾಗಿದ್ದು, ಹಾಸನ ಮತ್ತು ಚಿಕ್ಕಮಗಳೂರು ನಡುವಿನ ನೇರ ರೈಲು ಮಾರ್ಗ ನಿರ್ಮಾಣ ಯೋಜನೆಯ ಮೊದಲ ಹಂತದ ಸಿವಿಲ್ ಕಾಮಗಾರಿ ಪ್ರಾರಂಭವಾಗಿದೆ. ಮತ್ತು ಈ ಯೋಜನೆಯನ್ನು ರಾಜ್ಯ ಮತ್ತು ಕೇಂದ್ರ ಸರ್ಕಾರದ ತಲಾ ಶೇ 50ರಷ್ಟು ಪಾಲುದಾರಿಕೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಮೊದಲ ಹಂತದಲ್ಲಿ ಚಿಕ್ಕಮಗಳೂರು ಹಾದಿಹಳ್ಳಿ ನಡುವಿನ 9 ಕಿಲೋ ಮೀಟರ್ ಮಾರ್ಗಕ್ಕೆ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ, ಜಿಲ್ಲಾಡಳಿತ ಅಷ್ಟೂ ಜಾಗವನ್ನು ರೈಲ್ವೆ ಇಲಾಖೆಗೆ ಹಸ್ತಾಂತರಿಸಿದ ಕಾರಣ ಚುರುಕಾಗಿ ಸಿವಿಲ್ ಕಾಮಗಾರಿಯನ್ನು ಮುಗಿಸಿ ಚಿಕ್ಕಮಗಳೂರು-ಹಾದಿಹಳ್ಳಿ ನಡುವೆ ರೈಲು ಪರೀಕ್ಷೆಯನ್ನು ಯಶಸ್ವಿಯಾಗಿ ಇಲಾಖೆ ಮಾಡಿದೆ ಇನ್ನೂ ಹಾದಿಹಳ್ಳಿ-ಬೇಲೂರು ನಡುವಿನ 13 ಕಿಲೋ ಮೀಟರ್ ಮಾರ್ಗಕ್ಕೆ ಶೇ 90 ರಷ್ಟು ಜಾಗ ರೈಲ್ವೆ ಇಲಾಖೆಗೆ ಹಸ್ತಾಂತರ ಆಗಿದ್ದು ಕಾಮಗಾರಿ ಚುರುಕಾಗಿ ಆಗುತ್ತಿರುವ ಕಾರಣ ಬೇಲೂರಿನ ಜನರ ದಶಕಗಳ ಕನಸು ನನಸಾಗುತ್ತಿರುವುದಕ್ಕೆ ಹರ್ಷವ್ಯಕ್ತಪಡಿಸಿದ್ದಾರೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *