ಮಾಧ್ಯಮ ದಿನಾಚರಣೆ ಅಂಗವಾಗಿ ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವನ್ನು ಇಂದು ಬೆಳಗ್ಗೆ 8 ಗಂಟೆಗೆ ಹಾಸನದ ಸರ್ಕಾರಿ ಕಲಾ ಕಾಲೇಜು ಮೈದಾನದಲ್ಲಿ ಉದ್ಘಾಟನೆ ಮಾಡಿದ ಹಾಸನದ ಶಾಸಕ ಸ್ವರೂಪ .ಈ ಕ್ರೀಡಾಕೂಟದಲ್ಲಿ ಪತ್ರಕರ್ತರಿಗೆ ನೂರು ಮೀಟರ್ ಓಟ, ಗುಂಡು ಎಸೆತ ಸ್ಪರ್ಧೆ ಹಾಗೂ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಜಿಲ್ಲೆಯ ಎಲ್ಲ ಪತ್ರಕರ್ತರೂ ಪಾಲ್ಗೊಂಡು ಕ್ರೀಡಾಕೂಟ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧ್ಯಕ್ಷರಾದ ಬಾಳು ಗೋಪಾಲ್ ಹಾಗೂ ಪ್ರಧಾನ ಕಾರ್ಯದರ್ಶಿ ಮಂಜು ಬನವಾಸೆ ಕೋರಿದ್ದಾರೆ.