ಕಾಡಾನೆ ದಾಳಿ ವ್ಯಕ್ತಿ ಬಲಿ

ಸಕಲೇಶಪುರ:ಏ, 25: ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕನೊಬ್ಬ ಬಲಿಯಾಗಿರುವ ಘಟನೆ ತಾಲೂಕಿನ ಬೈಕೆರೆ ಗ್ರಾಮದಲ್ಲಿ ನಡೆದಿದೆ.ಷಣ್ಮುಖ(45) ಅಮೃತೇಶ್ವರ ಕಾಫಿ ತೋಟದ ಮಾಲಿಕ ಮೃತಪಟ್ಟಿರುವ ವ್ಯಕ್ತಿಯಾಗಿದ್ದರೆ.

ತೋಟದಲ್ಲಿ ಕೆಲಸ ಮಾಡಿಸಲು ತೆರಳಿದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದೆ.

ಮೃತ ಷಣ್ಮುಖ ಗೆ 15 ಎಕರೆ ಕಾಫಿ ಕಾಫಿ ತೋಟವಿದೆ. ರಾತ್ರಿಯಿಂದಲೇ ಆನೆಗಳ ಹಿಂಡು ತೋಟದಲ್ಲಿ ಬೀಡು ಬಿಟ್ಟಿತ್ತು ಈ ಮಾಹಿತಿ ಷಣ್ಮುಖ ರವರಿಗೂ ತಿಳಿದಿತ್ತು ಹೀಗಿದ್ದರೂ ಸಹ ಇವರು ಏಕೆ ತೋಟಕ್ಕೆ ಹೋದರು ಎಂಬುದು ತಿಳಿದು ಬಂದಿಲ್ಲ.

ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಪೊಲೀಸರು ಭೇಟಿ ನೀಡಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *