
ಸಕಲೇಶಪುರ : ತಾಲ್ಲೂಕಿನ ಕಾಡುಮನೆ ಹುಸೆರುಮನೆ ಹತ್ತಿರ ಚಿರತೆ ಅಥವಾ ಹುಲಿ ದಾಳಿಗೆ ಹಸು ಸಾವನ್ನಪ್ಪಿದ್ದು, ಈ ರಸ್ತೆಯಲ್ಲಿ ಪ್ರತಿನಿತ್ಯ ವಿಧ್ಯಾರ್ಥಿಗಳು ತಿರುಗಾಡುತ್ತಾರೆ, ಶಾಲಾ ಮಕ್ಕಳಿಗೆ ಎನಾದರೂ ತೊಂದರೆಯಾದರೆ ಯಾರು ಹೊಣೆ? ಎಂದು ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ಸಕಲೇಶಪುರ ತಾಲ್ಲೂಕು ಅಧ್ಯಕ್ಷ ರಮೇಶ್ ಪುಜಾರಿಯವರ ಪ್ರಶ್ನೆ.
ಅರಣ್ಯ ಇಲಾಖೆಯವರು ಪ್ರಾಣಿಗಳು ಓಡಾಡುವ ಜಾಗದಲ್ಲಿ ಸಿಸಿ ಕ್ಯಾಮೆರಾ ಹಾಕಿ ಕಾಡುಪ್ರಾಣಿಗಳನ್ನು ಹಿಡಿಯುವ ಕೆಲಸ ಮಾಡಬೇಕು ಇಲ್ಲವಾದರೆ ಪ್ರತಿಭಟನೆ ಅನಿವಾರ್ಯ ಎಂದ ತಾಲ್ಲೂಕು ಅಧ್ಯಕ್ಷ ರಮೇಶ್ ಪುಜಾರಿ.

