ಸಕಲೇಶಪುರ :- ತಾಲ್ಲೂಕಿನ ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸುಮಾರು ಒಂದು ತಿಂಗಳಿಂದ ಅಂಬುಲೆನ್ಸ್ 108 ವಾಹನವನ್ನು ನಾನ ಕಾರಣದಿಂದ ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ. ಇದರಿಂದ ಈ ಭಾಗದ ಸಾರ್ವಜನಿಕರಿಗೆ ತೊಂದರೆಯಾಗಿದೆ.ಅದ್ದರಿಂದ ಈ ವಿಚಾರವಾಗಿ ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ 18-06-2025 ರ ಬುಧವಾರ ಬೆಳ್ಳಗೆ 10.30 ರಿಂದ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ ಎಂದು ತಾಲ್ಲೂಕು ಕ.ರ.ವೇ ಅಧ್ಯಕ್ಷರಾದ ಗಗನ್ ಹಾಡ್ಲಳ್ಳಿ ತಿಳಿಸಿದ್ದಾರೆ.

ಹೆತ್ತೂರು ಹೋಬಳಿಯ ಸುತ್ತಮುತ್ತಲಿನ ಗ್ರಾಮಗಳಿಗೆ ಇದೊಂದೇ ಸರ್ಕಾರಿ ಆಸ್ಪತ್ರೆ. ಬಹುತೇಕ ಕೂಲಿ ಕಾರ್ಮಿಕರನ್ನು ಒಳಗೊಂಡಿರುವ ಈ ಹೋಬಳಿಯ ಜನರು ತಮ್ಮ ರೋಗಗಳಿಗೆ ಸರ್ಕಾರಿ ಆಸ್ಪತ್ರೆಯನ್ನೇ ಅವಲಂಬಿಸಿದ್ದಾರೆ.ಹೆತ್ತೂರು ಹೋಬಳಿಯು ಸುಮಾರು 35ಕ್ಕೂ ಹೆಚ್ಚು ಹಳ್ಳಿಗಳನ್ನೂ ಒಳಗೊಂಡಿದ್ದು, ಇದರಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚಿನ ಜನಸಂಖ್ಯೆಯನ್ನು ಹೊಂದಿದೆ. ಈ ಭಾಗದ ಜನರು ತಮ್ಮ ಗದ್ದೆ ತೋಟದ ಕೆಲಸ ಕಾರ್ಯಗಳನ್ನು ಮಾಡುವಾಗ ಆಗುವ ಚಿಕ್ಕಪುಟ್ಟ ಅನಾಹುತಗಳಿಗೆ ಈ ಸರ್ಕಾರಿ ಆಸ್ಪತ್ರೆಯ ಚಿಕಿತ್ಸೆಯನ್ನೇ ಅಲ್ಲದೆ ಉನ್ನತ ಚಿಕಿತ್ಸೆ ಬೇಕಾದರೆ 25 ಕಿ.ಮಿ ಹೆಚ್ಚು ದೂರ ಇರುವ ಸಕಲೇಶಪುರ ಸರ್ಕಾರಿ ಆಸ್ಪತ್ರೆಗೆ ಹೋಗಬೇಕಾದ ಪರಿಸ್ಥಿತಿ ಇದೆ. ಅದು ಕೂಡ ಇರುವ ಸರ್ಕಾರಿ ಆಂಬುಲೆನ್ಸ್ ವ್ಯವಸ್ಥೆಯಿಂದಲೇ.ಅಲ್ಲದೆ ಗರ್ಭಿಣಿಯರು, ತುರ್ತು ಚಿಕಿತ್ಸೆಗೆ ಈ ಆಸ್ಪತ್ರೆಯಿಂದ ಬೇರೆ ಉನ್ನತ ಆಧುನಿಕ ವ್ಯವಸ್ಥೆ ಇರುವ ಆಸ್ಪತ್ರೆಗೆ ಹೋಗಲು ಬಹುತೇಕ ಎಲ್ಲರೂ ಸರ್ಕಾರಿ ಆಂಬುಲೆನ್ಸ್ ವ್ಯವಸ್ಥೆಯಲ್ಲಿ ಅವಲಂಬಿಸಿದ್ದಾರೆ. ಇಂತಹ ಪರಿಸ್ಥಿತಿ ಇದ್ದರೂ ಕೂಡ ಬೇರೆ ಬೇರೆ ಕಾರಣವನ್ನು ಒಡ್ಡಿ ಬೇರೆ ಕಡೆಗೆ ಆಂಬುಲೆನ್ಸ್ ಅನ್ನು ಸ್ಥಳಾಂತರಿಸಲಾಗಿದೆ. ಇದರಿಂದ ಈ ಭಾಗದ ಸಾರ್ವಜನಿಕರಿಗೆ ತೊಂದರೆಯಾಗಿದೆ.

ಅದ್ದರಿಂದ ಈ ವಿಚಾರವಾಗಿ ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ನಾಳೆ ಬೆಳಗ್ಗೆ ಪ್ರತಿಭಟನೆ ಮಾಡಲಾಗುವುದು ಅದಕ್ಕೆ ಕೆಲಸ ಸಾರ್ವಜನಿಕರು ಭಾಗವಹಿಸುವ ಮೂಲಕ ಬೆಂಬಲ ನೀಡಬೇಕಾಗಿ ವಿನಂತಿ ಎಂದು ತಾಲ್ಲೂಕು ಕ.ರ.ವೇ ಅಧ್ಯಕ್ಷರಾದ ಗಗನ್ ಹಾಡ್ಲಹಳ್ಳಿ ಮನವಿ ಮಾಡಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *