
ಹಾಸನ: ಚನ್ನಂಗಿಹಳ್ಳಿ ದಲಿತ ಮಹಿಳೆಯರು ಮತ್ತು ಯುವಕನ ಮೇಲೆ ಹಲ್ಲೆ ನಡೆಸಿ ಜಾತಿ ದೌರ್ಜನ್ಯ ಎಸಗಿರುವವರನ್ನು ಬಂಧಿಸಿ, ದಲಿತರ ಮೇಲೆ ಹಾಕಿರುವ ಸುಳ್ಳು ಮೊಕದ್ದಮೆಯನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿ ಹಾಗೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಸಂಭಾಂಗಣದಲ್ಲಿ ಎಸ್.ಸಿ/ಎಸ್ ಟಿ ಕುಂದುಕೊರತೆ ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ, ಸಭೆಯನ್ನು ಬಹಿಷ್ಕರಿಸಿ ಜಿಲ್ಲಾ ಪಂಚಾಯತ್ ಮುಂಭಾಗ ದಲಿತ ಹಕ್ಕುಗಳ ಸಮಿತಿ-ಕರ್ನಾಟಕ (ಡಿಎಚ್ಎಸ್) ವತಿಯಿಂದ ಪ್ರತಿಭಟನಾ ಧರಣಿ ನಡೆಸಿ ಜಿಲ್ಲಾಧಿಕಾರಿಗಳು ಹಾಗು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಪ್ರತಿಭಟನೆಯಲ್ಲಿ ದಸಂಸ ಮುಖಂಡ ಮಂಜುನಾಥ್, ಚನ್ನಂಗಿಹಳ್ಳಿಯ ಚಿಕ್ಕಯ್ಯ, ಸ್ವಾಮಿ, ಶೇಖರ್ ರಾಜಮ್ಮ, ಕಿರಣಕುಮಾರ್ ಹಾಗು ನೊಂದ ದಲಿತರ ಜೊತೆಗೆ ಕುರುವಂಕ ಗ್ರಾಮಸ್ಥರು ಭಾಗವಹಿಸಿದ್ದರು.
