ಅರಸೀಕೆರೆ: ತಾಲ್ಲೂಕಿನ ಮಾಡಾಳು ಗ್ರಾಮದ ಶ್ರೀ ನಿರಂಜನ ಪೀಠ ಸೌಹಾರ್ದ ಸಹಕಾರ ಸಂಘದ ಚೊಚ್ಚಿಲ ವಾರ್ಷಿಕ ಮಹಾಸಭೆಯು ಇದೇ ಸೆಪ್ಟೆಂಬರ್ 20ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ನಡೆಯಲಿದೆ ಎಂದು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಬಿ. ಸುಷ್ಮಾ ತಿಳಿಸಿದ್ದಾರೆ.

ತಾಲೂಕಿನ ಕಣಕಟ್ಟೆ ಹೋಬಳಿ ಮಾಡಾಳು ಗ್ರಾಮದ ನಿರಂಜನ ಪೀಠದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ರುದ್ರಮುನಿ ಮಹಾಸ್ವಾಮೀಜಿ ಅಧ್ಯಕ್ಷತೆಯಲ್ಲಿ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ನಡೆಯಲಿದೆ.

ಅಂದು ಬೆಳಿಗ್ಗೆ 11ಕ್ಕೆ ನಡೆಯಲಿರುವ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸೌಹಾರ್ದ ವಿವಿದೋದ್ದೇಶ ಸಹಕಾರ ಸಂಘ ಆಡಳಿತ ಮಂಡಳಿ ಸಲಹೆಗಾರರಾದ ಮೈಸೂರಿನ ಶೇಖರ್ ಕೌಂಡಿನ್ಯ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಪತ್ರಿಕಾ ಗೋಷ್ಠಿಯಲ್ಲಿ ಸಂಘದ ಉಪಾಧ್ಯಕ್ಷ ನಾಗಸಮುದ್ರದ ಎನ್.ಜಿ. ಮರುಳುಸಿದ್ದಸ್ವಾಮಿ, ಮಾಡಾಳು ಶಿವಲಿಂಗಪ್ಪ, ಇತರರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *