
ಸಕಲೇಶಪುರ : ಯಸಳೂರು ಹೋಬಳಿಯ ಕರಗೂರು ಕೂಡಿಗೆಯ ಶ್ರೀ ವಾಯುಪುತ್ರ ಸೇವಾ ಸಮಿತಿ ವತಿಯಿಂದ ಆಂಜನೇಯ ಸ್ವಾಮಿ ಪ್ರತಿಷ್ಠಾಪನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು
ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಹೆಚ್.ಕೆ. ಕುಮಾರಸ್ವಾಮಿ ಅವರು ಭಾಗವಹಿಸಿ ಆಂಜನೇಯನ ಸ್ವಾಮಿಯ ಧ್ವಜಾರೋಹಣವನ್ನು ಮಾಡಿ ಶ್ರೀ ಆಂಜನೇಯನಿ ಸ್ವಾಮಿಗೆ ಪೂಜೆ ಸಲ್ಲಿಸಿದರು ಈ ಸಂದರ್ಭದಲ್ಲಿ ಮುಖಂಡರುಗಳು ಗ್ರಾಮಸ್ಥರು ಭಾಗವಹಿಸಿದ್ದರು
ಈ ಕಾರ್ಯಕ್ರಮದಲ್ಲಿ ಜೆಡಿಎಸ್ ಆಲೂರು ತಾಲೂಕು ಅಧ್ಯಕ್ಷರಾದ ಕೆ. ಎಸ್. ನಂಜೇಗೌಡರು, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಉಜ್ಮ ರುಜ್ಮಿ ಸುದರ್ಶನ್, ಹೆತ್ತೂರು ಪುಷ್ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ನಾಗಭೂಷಣ್, ಗೊದ್ದು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಕೌಶಿಕ್, ಉಚ್ಚಂಗಿ ಕೃಷಿಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ರಮೇಶ್ ಕರಗೂರು, ಸಮಿತಿಯ ಅಧ್ಯಕ್ಷರಾದ ಮಂಜು, ಹಿಂದೂ ಮುಖಂಡರಾದ ರಘು, ಅನೇಕ ಮುಖಂಡರು ಗ್ರಾಮಸ್ಥರು ಹಾಜರಿದ್ದರು.



