
ಸಕಲೇಶಪುರ ತಾಲ್ಲೂಕು ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ನೂತನವಾಗಿ ಆಯ್ಕೆಯಾದ ಶಾಸಕ ಸಿಮೆಂಟ್ ಮಂಜುನಾಥ್ ರವರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಹಿಂದುಳಿದ ವರ್ಗಗಳ ಒಕ್ಕೂಟಕ್ಕೆ ಸಮುದಾಯ ಭವನ ನಿರ್ಮಾಣ ಮಾಡಲು ನಿವೇಶನಕ್ಕಾಗಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕರು ಸಾಕಾರಾತ್ಮಕವಾಗಿ ಸ್ಪಂದಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರಾದ ಲೋಕೇಶ್. ಎಸ್. ಜಿ. ಗೌರವಾಧ್ಯಕ್ಷರಾದ ಚಂದ್ರ ಶೆಟ್ಟರು, ಉಪಾಧ್ಯಕ್ಷರಾದ ಶ್ರೀನಿವಾಸ್ರವರು, ಪ್ರಧಾನ ಕಾರ್ಯದರ್ಶಿಗಳಾದ ಸೋಮಶೇಖರ್ರವರು, ಕಾರ್ಯದರ್ಶಿಗಳಾದ ಆನಂದ್.ಸಿ. ಮುಖಂಡರಾದ ಧರ್ಮಪ್ಪ, ಸುಬ್ರಮಣ್ಯ, ರಂಗನಾಥ್, ರುದ್ರೇಶ್, ಲೋಕೇಶ್, ರಾಮು ಸೂರ್ಯ. ಎಸ್. ಕೆ, ರಘುನಾಥ್. ಕೆ, ಅಶ್ವಥ್, ಮಂಜುನಾಥ್ ಮುಂತಾದವರು ಹಾಜರಿದ್ದರು
