ವಳಲಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷರಾಗಿ ಸುದರ್ಶನ್ ಅವಿರೋಧ ಆಯ್ಕೆ.:-ಸಕಲೇಶಪುರ:- ಸಕಲೇಶಪುರ ತಾಲ್ಲೂಕು ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸುದರ್ಶನ್ ಅವಿರೋಧವಾಗಿ ಆಯ್ಕೆಯಾದರು.ವಳಲಹಳ್ಳಿ ಗ್ರಾಮಪಂಚಾಯಿತಿ ಅಧ್ಯಕ್ಷರದ ರೇಣು ಕುಮಾರ್ ಅವರು ಒಪ್ಪಂದದಂತೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು,ಖಾಲಿಯಿದ್ದ ಅಧ್ಯಕ್ಷರ ಗದ್ದುಗೆಯನ್ನು ಒಪ್ಪಂದದ ಮೇರೆಗೆ ವಳಲಹಳ್ಳಿ ಗ್ರಾಮದ ಬಿಜೆಪಿ ಬೆಂಬಲಿತ ಸದಸ್ಯರಾದ ಸುದರ್ಶನ್ ಅವರನ್ನು ಇಂದು ಅವಿರೋಧವಾಗಿ ಚುನಾವಣಾ ಅಧಿಕಾರಿ ರಾಮಕೃಷ್ಣ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.ಕಾರ್ಯಕ್ರಮದಲ್ಲಿ ಸಕಲೇಶಪುರ ತಾಲ್ಲೂಕು ಬಿಜೆಪಿ ಎಂಎಲ್ಎ ಅಭ್ಯರ್ಥಿ ಸಿಮೆಂಟ್ ಮಂಜು , ನಿಕಟಪೂರ್ವ ಅಧ್ಯಕ್ಷರಾದ ರೇಣು ಕುಮಾರ್, ಸ್ಥಳೀಯ ಬಿಜೆಪಿ ಮುಖಂಡರಾದ ವಳಲಹಳ್ಳಿ ಅಶ್ವಥ್ ಹಾಗೂ ಉಪಾಧ್ಯಕ್ಷರದ ಶೀಲಾ,ಸದಸ್ಯರಾದ ಕೆ.ಪಿ. ಆನಂದ್,ಭವಾನಿ, ಕರಡಿಗಾಲ ಹರೀಶ್, ಮಾಜಿ ಸೈನಿಕ ನಂದೀಶ್ ಸೇರಿದಂತೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಸ್ಥರು ಭಾಗಿಯಾಗಿ ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *