
ಸಕಲೇಶಪುರ ತಾಲ್ಲೂಕಿನ ಬಾಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ವಿವಿಧ ಕಾಮಗಾರಿಗಳಿಗೆ ಚಾಲನೆ.
ಬಾಗೆಯಲ್ಲಿ ಈ ದಿನ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಕಟ್ಟಡ ಹಾಗೂ ಗುಲಗಳಲೆ ದರ್ಬಾರ್ ಪೇಟೆಯ ಅಂಗನವಾಡಿ ಕೇಂದ್ರ ಉದ್ಘಾಟನೆ ಮಾಡಿದ ಶಾಸಕ ಸಿಮೆಂಟ್ ಮಂಜುರವರು
ಈ ಸಂದರ್ಭದಲ್ಲಿ ಮಾಜಿ ಶಾಸಕ ಎಚ್. ಎಂ ವಿಶ್ವನಾಥ್, ಬಾಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಯಶಂಕರ್, ತಾಲೂಕು ಪಂಚಾಯತ್ ಇ ಓ ರಾಮಕೃಷ್ಣ, ತಾಪಂ ಸಹಾಯಕ ನಿರ್ದೇಶಕರಾದ ಆದಿತ್ಯ, ಹರೀಶ್, ಎಪಿಎಂಸಿ ಮಾಜಿ ಅಧ್ಯಕ್ಷ ಕವನ್ ಗೌಡ,ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸವಿತಾ, ಬಾಗೆ ಗ್ರಾಮ ಪಂಚಾಯತ್ ಪಿ ಡಿ ಓ ಚಿನ್ನಸ್ವಾಮಿ, ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷೆ ಸುಲೋಚನಾ ರಾಮಕೃಷ್ಣ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ರಾಮಕೃಷ್ಣ, ರಾಕೇಶ್ ಮುಖಂಡರಾದ ದೊಡ್ಡದಿಣ್ಣೆ ಜಯ ಪ್ರಕಾಶ್, ರಾಜ್ ಕುಮಾರ್ ಸೇರಿದಂತೆ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.




