ಸಕಲೇಶಪುರ ತಾಲೂಕಿನ ಕಸಬಾ ಹೋಬಳಿಯ ಹಲಸುಲಿಗೆ, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಟಹಳ್ಳಿ, ಗೌತಮನಗರಕ್ಕೆ ಎಸ್.ಇ.ಪಿ ಅನುದಾನದಲ್ಲಿ ನಿರ್ಮಿಸಲ್ಪಟ್ಟ ಹೈಮಾಸ್ಟ್ ವಿದ್ಯುತ್ ದೀಪ ಹಾಗೂ ಸೋಲಾರ್ ದೀಪಗಳಿಗೆ ಶಾಸಕ ಸಿಮೆಂಟ್ ಮಂಜು ಉದ್ಘಾಟಿಸಿದರು

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಈ ಭಾಗದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು ರಾತ್ರಿ ವೇಳೆಯಲ್ಲಿ ಜನಸಾಮಾನ್ಯರು ತಿರುಗಾಡಲು ಭಯಪಡುತ್ತಿದ್ದರು ಇದನ್ನು ಮನಗಂಡ ಶಾಸಕರು ಹಾಗೂ ಸ್ಥಳೀಯ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿ ದೀಪ ಹಾಗೂ ಸೋಲಾರ್ ದೀಪಗಳನ್ನು ಅಳವಡಿಸುವ ಮೂಲಕ ಅನುಕೂಲ ಕಲ್ಪಿಸಿದ್ದಾರೆ.

ಈ ಸಂದರ್ಭದಲ್ಲಿ ಹಲಸುಲಿಗೆ ಗ್ರಾಮ ಪಂ ಅಧ್ಯಕ್ಷ ಕೃಷ್ಣ , ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಲ್ಲವಿ,ಸದಸ್ಯರಾದ ಶೋಭ ,ಶೃತಿ, ಸಮಾಜ ಕಲ್ಯಾಣ ಇಲಾಖೆವಾಧಿಕಾರಿ ಆನಂದ್ ಮೂರ್ತಿ, ಚೆಸ್ಕಾಂ ಎಇಇ ಚಲಪತಿ ರೆಡ್ಡಿ ಪಂಚಾಯತ್ ರಾಜ್ ಕುಶಾಲಪ್ಪ,ವಿದ್ಯುತ್ ಗುತ್ತಿಗೆದಾರ ಪ್ರೇಮನಾಥ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *