ಸಕಲೇಶಪುರ : ಜೋಕಾಲಿ ಆಡಲು ಹೋಗಿ ಬಾಲಕಿ ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ತಾಲ್ಲೂಕು ಹೆತ್ತೂರು ಹೋಬಳಿ ವನಗೂರು ಗ್ರಾಮದಲ್ಲಿ ನಡೆದಿದೆ. ಸಾನಿತಾ (9) ಮೃತಪಟ್ಟ ಬಾಲಕಿ.

ಬಸವರಾಜು-ಬೇಬಿ ದಂಪತಿಯ ಒಬ್ಬಳೇ ಪುತ್ರಿ ಸಾನಿತಾ ನಾಲ್ಕನೇ ತರಗತಿ ಓದುತ್ತಿದ್ದು, ಶನಿವಾರ ಶಾಲೆಗೆ ರಜೆಯಿದ್ದ ಕಾರಣ ಮನೆಯೊಳಗೆ ಸೀರೆ ಕಟ್ಟಿಕೊಂಡು ಜೋಕಾಲಿ ಆಡುತ್ತಿದ್ದಳು. ಈ ವೇಳೆ ಆಯತಪ್ಪಿ ಸಾನಿತಾ ಕುತ್ತಿಗೆಗೆ ಸೀರೆ ಬಿಗಿದು ಸಾವನ್ನಪ್ಪಿದ್ದಾಳೆ.

ಇದ್ದ ಒಬ್ಬಳೇ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *