ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಹೋಬಳಿಯ ವಳಲಹಳ್ಳಿ ಗ್ರಾಮಪಂಚಾಯಿತಿ ಬೆಳೆಗಾರರ ಸಂಘದ 9ನೇ ಮಾಸಿಕ ಸಭೆಯನ್ನು ವಿ.ಪಿ ವಿಶ್ವನಾಥ್ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.

ಸಭೆಯಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿ ಹೆಚ್ಚುತ್ತಿರುವ ಕಾಡಾನೆ ಸಮಸ್ಯೆಗೆ ಸರ್ಕಾರದಿಂದ ಕೈಗೊಂಡಿರುವ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಈ ಭಾಗದಲ್ಲಿ ಪ್ರತಿ ವರ್ಷಕ್ಕಿಂತ ಈ ವರ್ಷ ಕಡಿಮೆ ಮಳೆಯಾಗಿರುವುದರಿಂದ ಕಾಫಿ ಬೆಳೆಗಾರರು ತಮ್ಮ ಬೆಳೆಯನ್ನು ರಕ್ಷಿಸಿಕೊಳ್ಳಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು.

ಎರಡು ತಿಂಗಳಿಂದ ಜಾತಹಳ್ಳಿ ಹಾಗೂ ಬೊಬ್ಬನಹಳ್ಳಿ ಗ್ರಾಮದಲ್ಲಿ ಬೀದಿ ದೀಪದ ಸರಿ ಇಲ್ಲದೆ ಗ್ರಾಮಸ್ಥರು ರಾತ್ರಿವೇಳೆ ಕಾಡಾನೆ ಸಮಸ್ಯೆ ಅನುಭವಿಸುತ್ತಿದ್ದು ಇದರ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕ್ರಮ ಕೈಗೊಳ್ಳದಿರುವ ಬಗ್ಗೆ ಚರ್ಚಿಸಿ, ಗ್ರಾಮ ಪಂಚಾಯಿತಿ ಬೆಳೆಗಾರರ ಸಂಘದಿಂದ ಮನವಿ ಪತ್ರವನ್ನು ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಕೊಡುವಂತೆ ಈ ಸಂದರ್ಭದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಳಲಹಳ್ಳಿ ಗ್ರಾಮ ಪಂಚಾಯಿತಿ ಬೆಳೆಗಾರ ಸಂಘದ ಉಪಾಧ್ಯಕ್ಷ ವಿ .ಪಿ. ವಿಶ್ವನಾಥ್ , ಕಾರ್ಯದರ್ಶಿ ಪಾಲಾಕ್ಷ, ಜಿಲ್ಲಾ ಬೆಳೆಗಾರರ ಸಂಘದ ಸಂಘಟನಾ ಕಾರ್ಯದರ್ಶಿ ಕೆ .ಪಿ.ಕೃಷ್ಣೇಗೌಡ, ಸಹ ಕಾರ್ಯದರ್ಶಿ ದರ್ಶನ್ , ಖಜಾಂಚಿ ವಸಂತ್ ,ಹೋಬಳಿ ಬೆಳೆಗಾರರ ಸಂಘದ ನಿರ್ದೇಶಕರಾದ ಜಗನ್ನಾಥ್ ಸೇರಿದಂತೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸ್ಥರು ಹಾಗೂ ಬೆಳೆಗಾರರ ಸಂಘದ ಸದಸ್ಯರು ಭಾಗವಹಿಸಿ 9ನೇ ಮಾಸಿಕ ಸಭೆಯನ್ನು ನಡೆಸಲಾಯಿತು .

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *