
ಹಾಸನದಲ್ಲಿ ಕೀರ್ತಿ ಎಂಬ 23 ವರ್ಷದ ಯುವಕ ಮೃತಪಟ್ಟಿದ್ದಾನೆ. ಕೀರ್ತಿ, ಸತತ 1 ವಾರ ಶುಂಠಿಗೆ ಕಳೆನಾಶಕ ಸಿಂಪಡಿಸಿದ್ದ. ಬಳಿಕ ದಿಢೀರನೆ ವಾಂತಿ, ಸುಸ್ತಿನಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದ. ಆಸ್ಪತ್ರೆಗೆ ದಾಖಲಾಗಿ 4 ದಿನಗಳ ಬಳಿಕ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾನೆ.
ರಕ್ತದ ಪರೀಕ್ಷೆ ವೇಳೆ ಕೀರ್ತಿ ದೇಹದಲ್ಲಿ ವಿಷ ಇರೋದು ದೃಢವಾಗಿದೆ.
ಹಾಸನ, ಆ.29: ಕಳೆನಾಶಕ ಸಿಂಪಡಣೆ ವೇಳೆ ಮುಂಜಾಗ್ರತಾ ಕ್ರಮ ವಹಿಸದೆ ಯಡವಟ್ಟು ಮಾಡಿಕೊಂಡಿದ್ದು ಅಮಾಯಕ ಯುವಕ ಸಾವನ್ನಪ್ಪಿದ್ದಾನೆ ಹಾಸನ ತಾಲೂಕಿನ ಕಾರ್ಲೆ ಗ್ರಾಮದಲ್ಲಿ ಕಿಡ್ನಿ, ಲಿವರ್, ಶ್ವಾಸಕೋಶ ನಿಷ್ಕ್ರಿಯದಿಂದ ಕೀರ್ತಿ(23) ಎಂಬ ಯುವಕ ಮೃತಪಟ್ಟಿದ್ದಾನೆ.
ಕೀರ್ತಿ, ಸತತ 1 ವಾರ ಕಾಲ ಶುಂಠಿಗೆ(Ginger) ಕಳೆನಾಶಕ ಸಿಂಪಡಿಸಿದ್ದ. ಬಳಿಕ ದಿಢೀರನೆ ವಾಂತಿ, ಸುಸ್ತಿನಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದ. ಆಸ್ಪತ್ರೆಗೆ ದಾಖಲಾಗಿ 4 ದಿನಗಳ ಬಳಿಕ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟಿದ್ದಾನೆ.
ರಕ್ತದ ಪರೀಕ್ಷೆ ವೇಳೆ ಕೀರ್ತಿ ದೇಹದಲ್ಲಿ ವಿಷ ಇರೋದು ದೃಢವಾಗಿದೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

