
ಆಲೂರು : ಪಟ್ಟಣ ಪಂಚಾಯಿತಿಯ ವ್ಯಾಪ್ತಿಯ ಕುಡಿಯುವ ನೀರಿನ ಶುದ್ಧೀಕರಣ ಘಟಕಕ್ಕೆ ದಿಡೀರ್ ಭೇಟಿ ನೀಡಿದ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜುರವರು ಪರಿಶೀಲನೆ ಮಾಡಿ ಅಧಿಕಾರಿಗಳಿಂದ ಮಾಹಿತಿ ಪಡೆದರು ಮತ್ತು ನೀರಿನ ತೊಟ್ಟಿಗಳನ್ನು ಶುಚಿಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು .
ಈ ಸಂದರ್ಭದಲ್ಲಿ ಬೈರಾಪುರ ಗ್ರಾಮ ಪಂಚಾಯತಿ ಸದಸ್ಯರಾದ ಗಣೇಶ್ ಬಿಜೆಪಿ ಮುಖಂಡರಾದ ರಾಜ್ ಕುಮಾರ್, ನಂಜುಂಡಪ್ಪ, ಮೋಹನ್, ರವಿ ಇನ್ನಿತರರು ಇದ್ದರು.




