
ಸಕಲೇಶಪುರ : ಪಟ್ಟಣದ ಸಮೀಪವಿರುವ ಕೌಡಳ್ಳಿ ಗ್ರಾಮದ ಕಾಫಿ ತೋಟವೊಂದರಲ್ಲಿ ಶುಕ್ರವಾರ ಕಾಣಿಸಿಕೊಂಡ ಸುಮಾರು 13 ಕ್ಕೂ ಹೆಚ್ಚು ಕಾಡಾನೆಗಳ ಪೈಕಿ ಇಂದು ಮದ್ಯಾಹ್ನ ವೇಳೆ ಒಂಟಿ ಸಲಗವೊಂದು ಕೌಡಳ್ಳಿಗೆ ಹೋಗುವ ರಸ್ತೆಯಲ್ಲಿ ತಿರುಗಾಡುವ ಮೂಲಕ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದು ಗ್ರಾಮದ ಜನರು ರಸ್ತೆಯಲ್ಲಿ ತಿರುಗಾಡಲು ಭಯಪಡುತ್ತಿದ್ದು ಇದೀಗ ರಾತ್ರಿ ವೇಳೆಯಲ್ಲಿ ಗ್ರಾಮದ ಆವರಣದಲ್ಲಿ ಸುತ್ತಾಡುತ್ತಿದ್ದು ಜನರಲ್ಲಿ ಆತಂಕ ಸೃಷ್ಟಿಸುತ್ತಿದ್ದು ಕೂಡಲೇ ಅರಣ್ಯ ಇಲಾಖೆಯವರು ಈ ಆನೆಯನ್ನು ಹಿಡಿಯಬೇಕು ಎಂದು ಆನೆಮಹಲ್ ಗ್ರಾಮ ಪಂಚಾಯತಿ ಮಾಜಿ ಅದ್ಯಕ್ಷ ಹಾಲಿ ಸದಸ್ಯ ತಿಮ್ಮಯ್ಯ ಒತ್ತಾಯಿಸಿದ್ದಾರೆ.


