
ಹಾಸನ/ ಬೇಲೂರು/ ಹಳೇಬೀಡು : ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತಿನ ವಾರ್ಷಿಕ ವಿಶೇಷ ಸಾಮಾನ್ಯ ಸಭೆಯನ್ನು ಹಾಸನ ಜಿಲ್ಲೆ ಬೇಲೂರು ತಾಲೂಕು ಹಳೇಬೀಡು ಹೋಬಳಿ ಪುಷ್ಪಗಿರಿ ಮಠದ ಸಭಾಭವನದಲ್ಲಿ ನಡೆಯಿತು.
ವಿಶೇಷ ಸಾಮಾನ್ಯ ಸಭೆಯನ್ನು ಶ್ರೀ ಮಠದ ಪರಮಪೂಜ್ಯ ಶ್ರೀ ಶ್ರೀ ಸೋಮಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಉದ್ಘಾಟಿಸಿದರು, ಕಾರ್ಯಕ್ರಮದಲ್ಲಿ ಕೇಂದ್ರ ಸಾಹಿತ್ಯ ಪರಿಷತ್ತಿನ ರಾಜ್ಯ ಅದ್ಯಕ್ಷರಾದ ನಾಡೋಜ ಶ್ರೀ ಮಹೇಶ್ ಜೋಷಿ ಅವರು ಪ್ರಾಸ್ಥಾವಿಕ ನುಡಿಗಳನ್ನಾಡಿದರು, ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅದ್ಯಕ್ಷರಾದ ಡಾ.ಹೆಚ್.ಎಲ್.ಮಲ್ಲೇಶ್ ಗೌಡ , ಅವರು ಎಲ್ಲರನ್ನೂ ಸ್ವಾಗತಿಸಿದರು.
ಸಭೆಯಲ್ಲಿ ರಾಜ್ಯದ ವಿವಿದ ಜಿಲ್ಲೆಗಳ ಪರಿಷತ್ತಿನ ಅದ್ಯಕ್ಷರುಗಳು,ವಿವಿದ ತಾಲೂಕಿನ ಅದ್ಯಕ್ಷರುಗಳು ಮತ್ತು ಕಾರ್ಯಕಾರಿ ಮಂಡಳಿಯ ಪದಾಧಿಕಾರಿಗಳು ,ಸದಸ್ಯರು ಭಾಗವಹಿಸಿದ್ದರು.



