
ಸಕಲೇಶಪುರ.ನಾಳೆ ಸಕಲೇಶಪುರಕ್ಕೆ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆಯವರು ಆಗಮಿಸಲಿದ್ದಾರೆ. ಬುಧವಾರ ಬೆಳಗ್ಗೆ 11:30ಕ್ಕೆ ಆಲೂರು ತಾಲೂಕು ಹೆಮ್ಮಿಗೆ ಹೊನ್ನವಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಕಾಡಾನೆ ದಾಳಿಯಿಂದ ಮೃತಪಟ್ಟ ಎಚ್ ಎಚ್ ವೆಂಕಟೇಶ್ ರವರ ಮನೆಗೆ ಭೇಟಿ ನೀಡಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.

