
ಹಾಸನ : ದೇವರನ್ನು ನಂಬಿರುವ ನಮ್ಮ ಕುಟುಂಬಕ್ಕೆ ದೇವರ ಅನುಗ್ರಹದಿಂದ ಶುಭ ಸುದ್ದಿ ಬಂದಿದೆ ನಮ್ಮ ಕುಟುಂಬದ ಪ್ರತಿಯೊಬ್ಬ ಸದಸ್ಯರೂ ದೇವರನ್ನು ನಂಬಿರುವಾಗ ಆ ಸಿದ್ಧಿವಿನಾಯಕ ಪ್ರಜ್ವಲ್ ರೇವಣ್ಣನಿಗೆ ಶುಭ ಸುದ್ದಿ ಕೊಟ್ಟಿದ್ದಾನೆ ಎಂದು ಮಾಜಿ ಸಚಿವ ಹಾಗೂ ಹೊಳೆನರಸೀಪುರ ಶಾಸಕ ಎಚ್ ಡಿ ರೇವಣ್ಣ ಸಂತಸ ವ್ಯಕ್ತಪಡಿಸಿದ್ದಾರೆ.
ಸುಪ್ರೀಂಕೋರ್ಟ್ ನಲ್ಲಿ ಮಧ್ಯಂತರ ತಡೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ TV46 ವೆಬ್ ಡಿಜಿಟಲ್ ಚಾನಲ್ ನೊಂದಿಗೆ ಮಾತನಾಡಿದ ಅವರು ಇವತ್ತು ಬಂದಿರುವ ಸರ್ವೋಚ್ಚ ನ್ಯಾಯಾಲಯದ ಆದೇಶವನ್ನು ಸ್ವಾಗತ ಮಾಡುತ್ತೇವೆ ಶ್ರೀ ಗಣೇಶ ನನಗೆ ಮತ್ತು ಪ್ರಜ್ವಲ್ ರೇವಣ್ಣನಿಗೆ ಒಳ್ಳೆಯ ಸುದ್ದಿ ಕೊಟ್ಟಿದ್ದಾನೆ ಎಂದಿದ್ದಾರೆ.
