
ಸಕಲೇಶಪುರ -ಆಲೂರು-ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ಅವರ ಉಪಸ್ಥಿತಿಯಲ್ಲಿ ಹಾಗೂ ತಹಶೀಲ್ದಾರ್ ಸಕಲೇಶಪುರ ತಾಲ್ಲೂಕು ರವರ ಅಧ್ಯಕ್ಷತೆಯಲ್ಲಿ ಏರ್ಪಡಿಸಲಾಗಿದ್ದ ಸಕಲೇಶಪುರ ತಾಲ್ಲೂಕು ಮಟ್ಟದ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಜಾಗೃತಿ ಹಾಗೂ ಹಿತರಕ್ಷಣಾ ಸಮಿತಿಯ ತ್ರೈಮಾಸಿಕ ಸಭೆಯನ್ನು ಮಾನ್ಯ ಶಾಸಕರ ನಿರ್ದೇಶನದ ಮೇರೆಗೆ ಸಭೆಯ ಸಮಯವನ್ನು ಮಧ್ಯಾಹ್ನ 2-00 ಗಂಟೆಗೆ ಮುಂದೂಡಲಾಗಿದ್ದು, ಡಾ:ಬಿ.ಆರ್.ಅಂಬೇಡ್ಕರ್ ಭವನ, ನಗರ ಪೊಲೀಸ್ ಠಾಣೆ ಹಿಂಭಾಗ,ಸಕಲೇಶಪುರ ಟೌನ್ ಇಲ್ಲಿ ನಡೆಯಲಿದ್ದು, ಸಭೆಗೆ ಸಮಿತಿಯ ನಾಮ ನಿರ್ದೇಶಿತ ಸದಸ್ಯರುಗಳು, ಸಕಲೇಶಪುರ ತಾಲೂಕಿನ ಎಲ್ಲಾ ಸರ್ಕಾರಿ ಇಲಾಖಾ ಅಧಿಕಾರಿಗಳು, ಎಲ್ಲಾ ದಲಿತ ಸಂಘಟನೆಗಳ ಮುಖಂಡರುಗಳು ಹಾಗೂ ಪದಾಧಿಕಾರಿಗಳು ಹಾಗೂ ಮಾಧ್ಯಮ ಮಿತ್ರರು ಸಭೆಗೆ ಆಗಮಿಸಿ, ಸಭೆಯನ್ನು ಯಶಸ್ವಿಗೊಳಿಸಿ ಕೊಡಬೇಕಾಗಿ ಆನಂದ್ ಮೂರ್ತಿ ಸಹಾಯಕ ನಿರ್ದೇಶಕರು,ಸಮಾಜ ಕಲ್ಯಾಣ ಇಲಾಖೆ,ಸಕಲೇಶಪುರ ರವರು ಕೋರಿರುತ್ತಾರೆ.
